ಮೈಸೂರು : ಇಲ್ಲಿನ ಶಿವರಾಂಪೇಟೆಯ ಶೃಂಗಾರ ಹೋಟೆಲ್ ಹತ್ತಿರ ಇರುವ ಮನ್ನಾರ್ ಕೃಷ್ಣಶೆಟ್ಟಿ ಹಾಸ್ಟೆಲ್ ಗೋಡೆಗೆ ವಕ್ಫ್ ಆಸ್ತಿ ಎಂದು ನೋಟಿಸ್ ಅಂಟಿಸಲಾಗಿದೆ. ಸದ್ಯ ಈ ವಿಚಾರವಾಗಿ ಹಾಸ್ಟೆಲ್ ಮುಂಭಾಗ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಕನ್ನಡ ಪರ ಹೋರಾಟಗಾರರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ನೋಟಿಸ್ ಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ವಕ್ಫ್ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು ವಕ್ಫ್ ನಿಷೇಧ ಮಾಡುವಂತೆ ಆಗ್ರಹಿಸಿದರು.
ಬಳಿಕ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, 109 ವರ್ಷದ ಎಂ.ಕೆ ಹಾಸ್ಟೆಲ್ ಮೇಲೆ ವಕ್ಫ್ ನೋಟಿಸ್ ಅಂಟಿಸಿ ಈ ಅಸ್ತಿ ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರಿಗೆ ಮಹರಾಜರ ಹಿನ್ನಲೆ ಇದೆ ಹೊರತು ಹೈದರಾಲಿ, ಟಿಪ್ಪುಸುಲ್ತಾನ ಇತಿಹಾಸವಿಲ್ಲ. ವಕ್ಫ್ ಮಂಡಳಿ ಅವರು ಖಾಸಿಗೆ ಅಸ್ತಿ ಎಲ್ಲಾ ನನ್ನದ್ದು ಎಂದು ಕಬಳಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಕ್ಫ್ ತಿದ್ದುಪಡಿಯನ್ನು ತಂದಿದ್ದು. ವಕ್ಫ್ ವಕ್ಫ್ ಅಂತ ರೈತರ ಆಸ್ತಿ ಕಬಳಿಸುತ್ತಿದ್ದಾರೆ ಎಂದು ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…