ಮೈಸೂರು ನಗರ

ವಾಟರ್‌ ಬಿಲ್‌ ಹಣ ಗುಳುಂ ಪ್ರಕರಣ: ನೌಕರರನ್ನು ವಜಾಗೊಳಿಸಿದ ಪಾಲಿಕೆ ಆಯುಕ್ತ

ಮೈಸೂರು: ಮೈಸೂರು ನಗರ ಪಾಲಿಕೆ ನೀರಿನ ಬಿಲ್‌ ಬಾಕಿ ಗುಳುಂ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕೆಲಸಗಾರರನ್ನು ವಜಾ ಮಾಡಿ ಹಾಗೂ 15 ಮಂದಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಿಕೆ ಆಯುಕ್ತ ಅಸಾದ್‌ ಉರ್‌ ರೆಹಮಾನ್‌ ಷರೀಫ್ ಆದೇಶ ಹೊರಡಿಸಿದ್ದಾರೆ.

ವಾಟರ್‌ ಇನ್ಸ್‌ಪೆಕ್ಟರ್‌ಗಳಾದ ಚನ್ನೇಗೌಡ, ಕೆ.ಮಹೇಶ್‌, ಎನ್‌.ಮೋಹನ್‌, ಮೀಟರ್‌ ರೀಡರ್‌ಗಳಾದ ವೆಂಕಟೇಶ್ ಮತ್ತು ಸೈಫುಲ್ಲಾ ಎಂಬುವವರೇ ವಜಾಗೊಂಡ ನೌಕರರಾಗಿದ್ದಾರೆ.

ಸಾರ್ವಜನಿಕರಿಂದ ನೀರಿನ ಬಿಲ್‌ ಸಂಗ್ರಹಿಸಿ ಅದನ್ನು ಪಾಲಿಕೆ ಖಾತೆಗೆ ಜಮಾ ಮಾಡದೇ ನೌಕರರು ಹಣ ಗುಳುಂ ಮಾಡಿದ್ದರು.

ಇದರ ಜೊತೆಗೆ ಸಾರ್ವಜನಿಕರಿಗೆ ನಕಲಿ ಬಿಲ್‌ ರಸೀದಿ ನೀಡುತ್ತಿದ್ದರು. ಈ ಸಂಬಂಧ ಎಲ್ಲಾ ಕಡೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿ ಕೆ.ಜೆ.ಸಿಂಧು ಅವರು ತನಿಖೆ ನಡೆಸಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಷರೀಫ್‌ ಅವರು, ಈ ಕ್ರಮ ಕೈಗೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

4 mins ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

12 mins ago

ದಿಲ್ಲಿ ಗಣರಾಜ್ಯೋತ್ಸವ | ಚಾ.ನಗರದ ಇಬ್ಬರು ಮಹಿಳೆಯರಿಗೆ ಆಹ್ವಾನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…

20 mins ago

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ; ಜನತೆಗೆ ಶುಭಾ ಕೋರಿದ ಪ್ರಧಾನಿ ಮೋದಿ

ಹೊಸದಿಲ್ಲಿ : ದೇಶಾದ್ಯಂತ ಗಣರಾಜ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು,…

28 mins ago

‘ಗಾಡಿಚೌಕ’ ಶಾಲೆಗೆ ಡಿಜಿಟಲ್ ಜೀವಕಳೆ

ಶತಮಾನದ ಶಾಲೆಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳ ಆಸರೆ ಲೇಖಕ : ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು:…

44 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | 26 ಜನವರಿ,  ಶನಿವಾರ

1 hour ago