ಮೈಸೂರು: ಮೈಸೂರು ನಗರ ಪಾಲಿಕೆ ನೀರಿನ ಬಿಲ್ ಬಾಕಿ ಗುಳುಂ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಕೆಲಸಗಾರರನ್ನು ವಜಾ ಮಾಡಿ ಹಾಗೂ 15 ಮಂದಿ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಆದೇಶ ಹೊರಡಿಸಿದ್ದಾರೆ.
ವಾಟರ್ ಇನ್ಸ್ಪೆಕ್ಟರ್ಗಳಾದ ಚನ್ನೇಗೌಡ, ಕೆ.ಮಹೇಶ್, ಎನ್.ಮೋಹನ್, ಮೀಟರ್ ರೀಡರ್ಗಳಾದ ವೆಂಕಟೇಶ್ ಮತ್ತು ಸೈಫುಲ್ಲಾ ಎಂಬುವವರೇ ವಜಾಗೊಂಡ ನೌಕರರಾಗಿದ್ದಾರೆ.
ಸಾರ್ವಜನಿಕರಿಂದ ನೀರಿನ ಬಿಲ್ ಸಂಗ್ರಹಿಸಿ ಅದನ್ನು ಪಾಲಿಕೆ ಖಾತೆಗೆ ಜಮಾ ಮಾಡದೇ ನೌಕರರು ಹಣ ಗುಳುಂ ಮಾಡಿದ್ದರು.
ಇದರ ಜೊತೆಗೆ ಸಾರ್ವಜನಿಕರಿಗೆ ನಕಲಿ ಬಿಲ್ ರಸೀದಿ ನೀಡುತ್ತಿದ್ದರು. ಈ ಸಂಬಂಧ ಎಲ್ಲಾ ಕಡೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿ ಕೆ.ಜೆ.ಸಿಂಧು ಅವರು ತನಿಖೆ ನಡೆಸಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಷರೀಫ್ ಅವರು, ಈ ಕ್ರಮ ಕೈಗೊಂಡಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…