ಮೈಸೂರು ನಗರ

ಕೋರ್ಟ್‌ನಿಂದ ತಡೆಯಾಜ್ಞೆ ತಂದು ರಾಜಕಾರಣ ಮಾಡ್ತಿಲ್ಲ : ಪ್ರತಾಪ್‌ ಸಿಂಹ ವಿರುದ್ಧ ಮಾಜಿ ಶಾಸಕ ಎಲ್‌.ನಾಗೇಂದ್ರ ಕಿಡಿ

ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನಿನ್ನೆ(ಜ.6) ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮಾಜಿ ಶಾಸಕ ಎಲ್.ನಾಗೇಂದ್ರ ತೀರುಗೇಟು ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗೇಂದ್ರ, ಟಿಕೆಟ್‌ ಯಾರಿಗೆ ಕೊಡಬೇಕೆಂದು ನಿರ್ಧರಿಸುವುದು ಹೈಕಮಾಂಡ್.‌ ಪ್ರತಾಪ್‌ ಸಿಂಹಗೆ ಅದರ ಬಗ್ಗೆ ಅರಿವಿರಬೇಕು. ಯಾವ ಕಾರಣಕ್ಕೆ ಆ ರೀತಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದೇನೆ. ನನ್ನ ಬಗ್ಗೆ ಯಾವ ಆಪಾದನೆಗಳಿಲ್ಲ. ನಾನು ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ತಂದು ರಾಜಕಾರಣ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡುವಾಗಲೂ ಹೀಗೆಯೇ ಹೇಳಿದ್ದರು. ಪಾರ್ಲಿಮೆಂಟ್ ಟಿಕೆಟ್ ಯಾಕೆ ಅವರಿಗೆ ಸಿಗಲಿಲ್ಲ. ನನ್ನ ಕ್ಷೇತ್ರದ ಜೊತೆಗೆ ನಾಲ್ಕು ಕ್ಷೇತ್ರ ಗೆಲ್ಲಿಸಬೇಕಿದೆ. ನಮ್ಮ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ನಾನು ಕಡಿಮೆ ಅಂತರದಲ್ಲಿ ಸೋತಿದ್ದೇನೆ. ಪಕ್ಷದ ಇತಿಮಿತಿ ಮೀರಿ ಯಾರೂ ವರ್ತಿಸಬಾರದು. ಸಾರ್ವಜನಿಕರಿಗೆ ಯಾರೂ ಗೊಂದಲ ಮೂಡಿಸಬೇಡಿ. ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ತಿಳಿಸಿದರು.

ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬರಲಿಲ್ಲ. ಕಳೆದ ಬಾರಿ ಯದುವೀರ್ ಅವರಿಗೆ ೫೬,೫೦೦ ಮತ ನೀಡಿದ್ದೇವೆ. ಅವರೊಬ್ಬ ಹಿಂದು ಹುಲಿ ಇದ್ದೀನಿ ಅಂತಾರೆ. ಅವರು ರಾಜ್ಯನಾಯಕರಾಗಿ ಬೆಳೆದಿದ್ದಾರೆ. ಅವರು ಬೇರೆ ಎಲ್ಲಾದರೂ ಸ್ಪರ್ಧೆ ಮಾಡಲಿ. ಅವರು ಬೇರೆ ಊರಿನಿಂದ ಬಂದವರು. ನಾನು ಇದೇ ಊರಿನವನು, ಬೇರೆ ಕಡೆ ಹೋಗಲು ಆಗಲ್ಲ ನನ್ನ ಹುಟ್ಟೂರಿನಲ್ಲೇ ನನ್ನ ಹೋರಾಟ ಎಂದರು.

೨೦೨೮ರ ಚುನಾವಣೆಗೂ ನನಗೇ ಟಿಕೆಟ್ ಸಿಗುವ ವಿಶ್ವಾಸ ಇದೆ. ಮಂಡಲದ ಅಧ್ಯಕ್ಷರು ಯಾರ ಪರ ಇದ್ದಾರೆ ಒಮ್ಮೆ ಕೇಳಿ. ನನಗೆ ಅವರಿಗಿಂತ ೧೦೦ ರಷ್ಟು ಕಾರ್ಯಕರ್ತರು ಜೊತೆಗಿದ್ದಾರೆ. ನಮ್ಮ ಸಂಬಂಧಿಕರು, ಸ್ನೇಹಿತರು ಎಲ್ಲರೂ ನನ್ನ ಜೊತೆ ಇದ್ದಾರೆ ಎಂದು ತಿರುಗೇಟು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago