ಮೈಸೂರು ನಗರ

ಸಿ.ಟಿ.ರವಿಯನ್ನು ಲೂಟಿ ರವಿ ಅಂತಾನೇ ನಾವು ಕರಿಯೋದು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

ಮೈಸೂರು: ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಸವಿತಾ ಸಮಾಜದ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವಹೇಳನ ಹೇಳಿಕೆ ನೀಡಿರುವ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಇದನ್ನು ಓದಿ: ವಿದ್ಯುತ್‌ ಸ್ಪರ್ಶಿಸಿ ಕಾಡಾನೆಗಳ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಈಶ್ವರ್‌ ಖಂಡ್ರೆ

ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್‌ ಅವರು, ಸಿ.ಟಿ.ರವಿಯನ್ನು ಲೂಟಿ ರವಿ ಅಂತಾನೆ ನಾವು ಕರಿಯೋದು. ಸವಿತಾ ಸಮಾಜದ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ಈ ಹಿಂದೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದರು. ಆದರೂ ಸಭಾಪತಿ ಹೊರಟ್ಟಿ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ.

ಈಗ ಆಡಿಯೋದಲ್ಲಿ ನಿಂದಿಸಿದ್ದು ದೃಢವಾಗಿದೆ. ಸಭಾಪತಿ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗರ ವಿಚಾರದಲ್ಲಿ ನ್ಯಾಯಾಲಯಗಳು ಕೆಲ ಸಂಸ್ಥೆಗಳು ಆಕ್ಟಿವ್ ಆಗಿ ಕೆಲಸ ಮಾಡುತ್ತಿವೆ. ಬಿಜೆಪಿಗರ ಮನಸ್ಥಿತಿ ಈ ರೀತಿ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈಗ ಸುಖಾ ಸುಮ್ಮನೆ ಮಾತನಾಡೋದನ್ನು ಕಡಿಮೆ ಮಾಡಿದ್ದಾರೆ.

ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮೈಸೂರು ಭಾಗದ ಮಾಜಿ ಸಂಸದ ಏನೇನೋ ಮಾತನಾಡ್ತಾರೆ. ಸಿ.ಟಿ.ರವಿ ವಿರುದ್ಧ ನಾನೇ ದೂರು ನೀಡಲು ಮುಂದಾಗುತ್ತಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

12 mins ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

36 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

38 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

51 mins ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

57 mins ago

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

1 hour ago