ಮೈಸೂರು: ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಸವಿತಾ ಸಮಾಜದ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವಹೇಳನ ಹೇಳಿಕೆ ನೀಡಿರುವ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಇದನ್ನು ಓದಿ: ವಿದ್ಯುತ್ ಸ್ಪರ್ಶಿಸಿ ಕಾಡಾನೆಗಳ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಈಶ್ವರ್ ಖಂಡ್ರೆ
ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್ ಅವರು, ಸಿ.ಟಿ.ರವಿಯನ್ನು ಲೂಟಿ ರವಿ ಅಂತಾನೆ ನಾವು ಕರಿಯೋದು. ಸವಿತಾ ಸಮಾಜದ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ಈ ಹಿಂದೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದರು. ಆದರೂ ಸಭಾಪತಿ ಹೊರಟ್ಟಿ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ.
ಈಗ ಆಡಿಯೋದಲ್ಲಿ ನಿಂದಿಸಿದ್ದು ದೃಢವಾಗಿದೆ. ಸಭಾಪತಿ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗರ ವಿಚಾರದಲ್ಲಿ ನ್ಯಾಯಾಲಯಗಳು ಕೆಲ ಸಂಸ್ಥೆಗಳು ಆಕ್ಟಿವ್ ಆಗಿ ಕೆಲಸ ಮಾಡುತ್ತಿವೆ. ಬಿಜೆಪಿಗರ ಮನಸ್ಥಿತಿ ಈ ರೀತಿ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈಗ ಸುಖಾ ಸುಮ್ಮನೆ ಮಾತನಾಡೋದನ್ನು ಕಡಿಮೆ ಮಾಡಿದ್ದಾರೆ.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮೈಸೂರು ಭಾಗದ ಮಾಜಿ ಸಂಸದ ಏನೇನೋ ಮಾತನಾಡ್ತಾರೆ. ಸಿ.ಟಿ.ರವಿ ವಿರುದ್ಧ ನಾನೇ ದೂರು ನೀಡಲು ಮುಂದಾಗುತ್ತಿದ್ದೇನೆ ಎಂದು ಹೇಳಿದರು.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…