ಮೈಸೂರು: ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಸವಿತಾ ಸಮಾಜದ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವಹೇಳನ ಹೇಳಿಕೆ ನೀಡಿರುವ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಇದನ್ನು ಓದಿ: ವಿದ್ಯುತ್ ಸ್ಪರ್ಶಿಸಿ ಕಾಡಾನೆಗಳ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಈಶ್ವರ್ ಖಂಡ್ರೆ
ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್ ಅವರು, ಸಿ.ಟಿ.ರವಿಯನ್ನು ಲೂಟಿ ರವಿ ಅಂತಾನೆ ನಾವು ಕರಿಯೋದು. ಸವಿತಾ ಸಮಾಜದ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ಈ ಹಿಂದೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದರು. ಆದರೂ ಸಭಾಪತಿ ಹೊರಟ್ಟಿ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ.
ಈಗ ಆಡಿಯೋದಲ್ಲಿ ನಿಂದಿಸಿದ್ದು ದೃಢವಾಗಿದೆ. ಸಭಾಪತಿ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗರ ವಿಚಾರದಲ್ಲಿ ನ್ಯಾಯಾಲಯಗಳು ಕೆಲ ಸಂಸ್ಥೆಗಳು ಆಕ್ಟಿವ್ ಆಗಿ ಕೆಲಸ ಮಾಡುತ್ತಿವೆ. ಬಿಜೆಪಿಗರ ಮನಸ್ಥಿತಿ ಈ ರೀತಿ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈಗ ಸುಖಾ ಸುಮ್ಮನೆ ಮಾತನಾಡೋದನ್ನು ಕಡಿಮೆ ಮಾಡಿದ್ದಾರೆ.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮೈಸೂರು ಭಾಗದ ಮಾಜಿ ಸಂಸದ ಏನೇನೋ ಮಾತನಾಡ್ತಾರೆ. ಸಿ.ಟಿ.ರವಿ ವಿರುದ್ಧ ನಾನೇ ದೂರು ನೀಡಲು ಮುಂದಾಗುತ್ತಿದ್ದೇನೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…