ಮೈಸೂರು ನಗರ

ಪರಿಸರ ಸಂರಕ್ಷಣೆ ಬಗ್ಗೆ ಜಾಗೃತರಾಗಬೇಕು : ಡಾ.ಚಮರಂ

ಪರಿಸರವಾದಿ ಅಂಬೇಡ್ಕರ್‌ ವಿಚಾರಗೋಷ್ಠಿಯಲ್ಲಿ ಸಲಹೆ

ಮೈಸೂರು: ಪರಿಸರವಿಲ್ಲದೆ ಜೀವಿಗಳಿಲ್ಲ. ಸೂಕ್ಷ ಜೀವಿಯಿಂದ ಹಿಡಿದು, ಪ್ರಾಣಿ, ಪಕ್ಷಿ ಸಂಕುಲ, ಮಾನವರನ್ನು ಒಳಗೊಂಡಂತೆ ಎಲ್ಲರಿಗೂ ಬದುಕಲು ಸಸ್ಯ ಪ್ರಪಂಚ ಅತ್ಯಗತ್ಯ. ಗಿಡಮರ ಇಲ್ಲದಿದ್ದಲ್ಲಿ ಬದುಕಲು ಸಾಧ್ಯವಿಲ್ಲ. ಹಾಗಾಗಿ, ಗಿಡ ಮರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕಿದೆ ಎಂದು ಸಸ್ಯ ವಿಜ್ಞಾನ ಶಾಸ್ತ್ರ ಸಹಾಯಕ ಅಧ್ಯಾಪಕ ಡಾ.ಕೃಷ್ಣಮೂರ್ತಿ ಚಮರಂ ಹೇಳಿದರು.

ಇನ್ಸ್‌ಟಿಟ್ಯೂಟ್ ಆಫ್ ಸೋಷಿಯಲ್ ವರ್ಕರ್ಸ್ ಫಾರ್ ಆಕ್ಷನ್ ರೀಸರ್ಚ್ ಹಾಗೂ ಸಂಜೀವಯ್ಯ ಮೆಮೋರಿಯಲ್ ಎಜುಕೇಶನ್ ಸೊಸೈಟಿ ಸಹಯೋಗದೊಂದಿಗೆ ಸಿದ್ದೇಶ್ವರ ಪ್ರೌಢಶಾಲೆ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ʻಪರಿಸರವಾದಿ ಅಂಬೇಡ್ಕರ್’ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

ಗಾಂಧಿಜೀ ಉಪ್ಪಿನ ಸತ್ಯಾಗ್ರಹ ನಡೆಸಿದಂತೆ, ಡಾ.ಅಂಬೇಡ್ಕರ್ ಅವರು ನೀರಿಗಾಗಿ ಚಳುವಳಿ ನಡೆಸಿದ್ದರು. ಅದು ದಲಿತರು ಮುಟ್ಟುವಂತಿಲ್ಲ ಅನ್ನುವ ಜಾತಿವಾದಿಗಳ ವಿರುದ್ಧ ಮಹಾಡ್ ನ ಚೌಡಾರ್ ಕೆರೆ ಹೋರಾಟ ನಡೆಸಿದ ಮಹೋನ್ನತ ಚಳುವಳಿ ಆಗಿತ್ತು ಎಂದರು.

ನೀರಿನ ಚಳುವಳಿ ಆರಂಭಿಸಿದ್ದ ಅಂಬೇಡ್ಕರ್‌
ನಿಸರ್ಗವೇ ನೀಡುವ ಸಂಪನ್ಮೂಲ ಎಂದರೆ ಗಾಳಿ, ನೀರು, ಬೆಳಕು. ಇದನ್ನ ಪಡೆಯಲು ಎಲ್ಲರೂ ಅರ್ಹರೆ ಇದಕ್ಕೆ ಪ್ರತ್ಯೇಕ ಮಾನದಂಡ ಇಲ್ಲ. ಇದೆಲ್ಲವೂ ನಿಸರ್ಗದತ್ತವಾದದ್ದು ಯಾರಪ್ಪಣೆಯ ಅಗತ್ಯತೆ ಇಲ್ಲ. ಹೀಗಿದ್ದರೂ ಬ್ರಾಹ್ಮಣ ಶಾಹಿ ವ್ಯವಸ್ಥೆ, ಮೇಲ್ವರ್ಗದ ಜನ ಜಾತಿ ಹೆಸರಿನಲ್ಲಿ ನಿಸರ್ಗ ಮೂಲದ ಸಂಪನ್ಮೂಲಗಳನ್ನು ಮುಟ್ಟಲು ಬಿಡುತ್ತಿರಲಿಲ್ಲ. ಇದನ್ನೆಲ್ಲಾ ಖಂಡಿಸಿ ನೀರನ್ನು ಮುಟ್ಟುವ ಮೂಲಕ ಚಳುವಳಿಯನ್ನು ಆರಂಭಿಸಿದ್ದೇ ಅಂಬೇಡ್ಕರ್ ಅವರು ಎಂದರು.

ಅಂಬೇಡ್ಕರ್‌ ಕೆಲಸವನ್ನು ಮರೆಮಾಚಲಾಗಿದೆ
ಭಾಕ್ರನಂಗಲ್ ಆಣೆಕಟ್ಟಿಗೆ ಅಡಿಗಲ್ಲು ಹಾಕಿದರು. ಮಹಾನದಿಗೆ ಆಣೆಕಟ್ಟು ಕಟ್ಟಿಸಿದರು. ಅಂದಿನ ಬ್ರಿಟಿಷ್ ಸರ್ಕಾರದಲ್ಲಿ ಅಂದರೆ ಸ್ವತಂತ್ರ ಪೂರ್ವದಲ್ಲಿ ಕಾರ್ಮಿಕ ಹಾಗೂ ನೀರಾವರಿ ಸಚಿವರಾಗಿ ಕೆಲಸ ಮಾಡಿದರು. ಇದು ದೇಶದ ಜನರಿಗೆ ತಿಳಿದಿಲ್ಲ, ತಿಳಿಯದಂತೆ ಮರೆ ಮಾಚಲಾಗಿದೆ. ಪ್ರತಿ ಜೀವಿಗೂ ಜೀವಿಸುವ ಹಕ್ಕಿದೆ. ಅದರ ಆವಾಸ ಸ್ಥಾನ ಕಸಿದುಕೊಳ್ಳಲು ಯಾರಿಗೂ ಹಕ್ಕಿಲ್ಲ. ಯಾವಾಗ ಪ್ರಾಣಿ, ಪಕ್ಷಿ ಅದರ ವಾಸ ಸ್ಥಾನವನ್ನು ಮನುಷ್ಯ ಬಲವಂತವಾಗಿ ಕಸಿದುಕೊಳ್ಳುತ್ತಾನೆ ಆಗ ಅಸಮತೋಲನ ಕಾಡುತ್ತೆ ಆಗಲೇ ಪ್ರಾಣಿ ಹಾಗೂ ಮಾನವ ಸಂಘರ್ಷಕ್ಕೆ ದಾರಿಯಾಗುತ್ತೆ ಎಂದು ಹೇಳಿದರು.

ಅಂದೇ ಅಂಬೇಡ್ಕರ್ ಅವರು ಗೋಮಾಳ, ಹುಲ್ಲುಗಾವಲು ಮತ್ತಿತರ ಕೃಷಿಯೇತರ ಜಾನುವಾರ ಪೂರಕ ವಿಚಾರಗಳನ್ನು ತಂದಿದ್ದರು. ಬಾಬಾ ಸಾಹೇಬರು ವಕೀಲರು, ಪತ್ರಕರ್ತರು, ಸಂವಿಧಾನ ಶಿಲ್ಪಿ, ರಾಜಕಾರಣಿ, ಹೋರಾಟಗಾರರಷ್ಟೇ ಅಲ್ಲಾ ಅವರು ಪರಿಸರ ವಾದಿ. ಪರಿಸರದ ಮೇಲಿದ್ದ ಕಾಳಜಿ ಮೇಲೆ ಇನ್ನಷ್ಟು ಬೆಳಕು ಚೆಲ್ಲುವ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಉಪ ಪೊಲೀಸ್ ಆಯುಕ್ತರಾದ ಕೆ.ಎಸ್.ಸುಂದರ್ ರಾಜ್ ಚಾಲನೆ ನೀಡಿದರು. ವಿಚಾರಗೋಷ್ಠಿಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್, ಸಂಜೀವಯ್ಯ ಮೆಮೋರಿಯಲ್ ಟ್ರಸ್ಟ್‌ನ ಬಿ.ಜಿ. ದಯಾನಂದ್ ಮೂರ್ತಿ, ಡಾ. ಶ್ರೀನಿವಾಸ. ಡಿ. ಮಣಗಳ್ಳಿ, ಪತ್ರಕರ್ತ ಮೋಹನ್ ಮೈಸೂರು, ಅಧ್ಯಾಪಕರಾದ ಡಾ. ಟಿ. ನಿರಂಜನ್ ಕುಮಾರ್, ಐ. ಡಿ. ಲೋಕೇಶ್. ನಿವೃತ್ತ ಗ್ರಂಥಪಾಲಕರಾದ ರಾಮಯ್ಯ, ಕೆ. ಮಹೇಶ್ ಸಂಶೋಧಕರಾದ ಮನು, ಮಹೇಶ್, ಜಯಚಂದ್ರ ಇನ್ನಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

54 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

1 hour ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

4 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

4 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

5 hours ago