ಮೈಸೂರು ನಗರ

ಸೆಪ್ಟೆಂಬರ್ ಮೊದಲ ವಾರವೇ ದಸರಾ ಉದ್ಘಾಟಕರಿಗೆ ಆಹ್ವಾನ ನೀಡುತ್ತೇವೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಸೆಪ್ಟೆಂಬರ್ ಮೊದಲ ಅಥವಾ 2 ನೇ ವಾರದಲ್ಲಿ ಉದ್ಘಾಟಕರು ಹಾಗೂ ಮುಖ್ಯಮಂತ್ರಿ, ಅಪ್ ಮುಖ್ಯಮಂತ್ರಿ, ರಾಜ್ಯಪಾಲರಿಗೆ ದಸರಾಗೆ ಅಧಿಕೃತ ಆಹ್ವಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ದಸರಾ ಮಹೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಸಾಂಸ್ಕೃತಿಕ ದಸರಾ ಮೆರವಣಿಗೆ ಸೇರಿದಂತೆ ದಸರಾ ಉಪ ಸಮಿತಿಗಳನ್ನು ನೇಮಕಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಮೊದಲ ಹಾಗೂ ಎರಡನೇ ತಂಡದ ಒಟ್ಟು 14 ಆನೆಗಳಿಗೆ ಪ್ರತಿದಿನ ಎರಡು ಬಾರಿ ಜಂಬೂ ಸವಾರಿ ಸಾಗುವ ರಾಜಮಾರ್ಗಗಳಲ್ಲಿ ತಾಲೀಮು ನಡೆಸಲಾಗುತ್ತಿದೆ. ಎಲ್ಲಾ ಆನೆಗಳು ಇಲ್ಲಿಯ ವಾತಾವರಣಕ್ಕೆ ಹೊಂದಿಕೊಳ್ಳುತ್ತಿದೆ, 14 ಆನೆಗಳು ಅರೋಗ್ಯಯುತವಾಗಿದೆ, ಮುಂದಿನ ದಿನಗಳಲ್ಲಿ ಚಿನ್ನದ ಅಂಬಾರಿ ಹೊರುವ ಆನೆಗಳಿಗೆ ಬಾರ ಹೊರಿಸುವ ತಾಲೀಮು ನಡೆಸಲಾಗುವುದು ಎಂದು ಹಿರಿಯ ಅರಣ್ಯಾಧಿಕಾರಿ ಪ್ರಭುಗೌಡ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago