ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ತೀರ್ಪು ಇಂದು(ಸೆ.24) ಹೈಕೋರ್ಟ್ನಲ್ಲಿ ಹೊರಬೀಳಲಿದ್ದು ತೀರ್ಪು ನಮ್ಮ ಪರ ಬರದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಮುಡಾ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇಂದು ಮುಖ್ಯಮಂತ್ರಿ ಪ್ರಾಸಿಕ್ಯೂಷನ್ಗೆ ಸಂಬಂಧಿಸಿದಂತೆ ತೀರ್ಪು ಬರಲಿದೆ. ಈ ವಿಚಾರವಾಗಿ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರ ತೀರ್ಪು ಬಂದು, ನಮ್ಮ ಪರ ತೀರ್ಪು ಬರದೇ ಹೋದರೆ ನಾವೆಲ್ಲರೂ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ.
ಮುಡಾ ಪ್ರಕರಣದಲ್ಲಿ ಅಂತಿಮ ಅಂತ್ಯ ಕಾಣಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಆರೋಪಿಗಳು ತಪ್ಪು ಮಾಡಿಲ್ಲ ಎಂದು ಹೇಳುವುದು ನೈಜತೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನ್ಯಾಯಾಲಯಕ್ಕೆ ಈಗಾಗಲೇ ಅನೇಕ ಸಾಕ್ಷಿ ನೀಡಿದ್ದೇವೆ. ಜೊತೆಗೆ ಸಿಎಂ ಅವರು ಸಹ ನಮ್ಮಂತೆಯೇ ಸಾಕ್ಷಿಗಳನ್ನು ನೀಡಿರುತ್ತಾರೆ. ಸಿದ್ದರಾಮಯ್ಯ ಅವರ ಮಡದಿ ಹೆಸರಿನಲ್ಲಿರುವ 50:50 ಅನುಪಾತದ ಬದಲಿ ನಿವೇಶನ ಅವರ ಅಧಿಕಾರ ಅವಧಿಯಲ್ಲೇ ಪಡೆದಿದ್ದಾರೆ. ಮುಡಾದ 50:50 ಅನುಪಾತದ ಬದಲಿ ನಿವೇಶನ ತಪ್ಪು ಎಂದು ಆದೇಶದಲ್ಲೇ ಸ್ಪಷ್ಟವಾಗಿದೆ. ಆಗಿದ್ದ ಮೇಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ನಿವೇಶನ ಪಡೆದಿರುವುದು ತಪ್ಪು ಎನ್ನುವುದು ಕೂಡ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…