ಮೈಸೂರು: ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟೇ ಇಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿದ್ದಾರೆ.
ನಗರದಲ್ಲಿ ಇಂದು (ಫೆ.19) ಮಾತನಾಡಿದ ಅವರು, ಆ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡದೇ ಬೇರೆ ಯಾರ ಹೆಸರಿಡಬೇಕು. ಮಹಾರಾಜರ ನಂತರ ಮೈಸೂರು ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿರುವುದು ಸಿದ್ದರಾಮಯ್ಯ ಅವರು. ಆ ರಸ್ತೆಯಲ್ಲಿರುವ ಜಯದೇವ, ಜಿಲ್ಲಾಸ್ಪತ್ರೆ, ಇಎಸ್ಐ ಆಸ್ಪತ್ರೆ ರಿನೋವೇಷನ್, ಸ್ಯಾನಿಟೋರಿಯಂ ಆಸ್ಪತ್ರೆ ಸೇರಿದಂತೆ ಹಲವಾರು ಆಸ್ಪತ್ರೆಗಳ ಅಭಿವೃದ್ದಿ ಮಾಡಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಅವರೇ ರಸ್ತೆಯ ವಿಚಾರದಲ್ಲಿ ಸುಮ್ಮನೆ ವಿವಾದ ಸೃಷ್ಠಿಸೋದು ಬೇಡ ಅಂತ ಹೇಳಿದ್ದಾರೆ. ಆದರೂ, ಸಂಸದ ಯದುವೀರ್ ಅವರಿಗೂ ಕೂಡ ಮನವಿ ಮಾಡಿದ್ದೇವೆ. ಎಲ್ಲರಿಗೂ ಮನವರಿಕೆ ಮಾಡಿ ಆ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಬೇಕು. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಚುನಾವಣೆಯಲ್ಲಿ ನಮಗೆ ಪೂರಕವಾದ ಫಲಿತಾಂಶ ಬರಬೇಕು ಅಂದ್ರೆ ಡಿಕೆ ಶಿವಕುಮಾರ್ ಅಧ್ಯಕ್ಷರಾಗಿರಬೇಕು ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…