ಮೈಸೂರು: ಭಾರತ ದೇಶವನ್ನು ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಬಾರದೆಂಬ ಹೇಳಿಕೆಯ ಮೂಲಕ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯಿಂದ ಕೂಡಿರುವ ದೇಶವಾಗಿದೆ. ಆದರೆ ಕೆಲ ರಾಜಕೀಯ ಗುಂಪುಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮದ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆ. ಅದನ್ನು ನಾವೆಲ್ಲರೂ ವಿರೋಧಿಸಬೇಕು. ಇಲ್ಲವಾದರೆ ಒಂದು ಧರ್ಮದ ರಾಷ್ಟ್ರವಾಗಿ ಉಳಿಯುತ್ತದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಏಕೆಂದರೆ ಸಂವಿಧಾನದ ಪೀಠಿಕೆಯಲ್ಲಿ ಎಲ್ಲಾ ಜನಾಂಗದ ಹಾಗೂ ಧರ್ಮದ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂಬಂತೆ ಉಲ್ಲೇಖಿಸಿದೆ. ಅಲ್ಲದೇ ನಮ್ಮ ದೇಶದ ಸಂವಿಧಾನ ಕಠಿಣವಾಗಿದೆ. ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಹೊರಟಿರುವುದು ಅಪಾಯಕಾರಿಯಾಗಿದೆ. ಹೀಗಾಗಿ ಸಂವಿಧಾನವನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.
ಇನ್ನು, ಕೆಲವು ಜನರು ನಮ್ಮ ದೇಶವನ್ನು ಒಂದು ಧರ್ಮದ ರಾಷ್ಟ್ರವಾಗಬೇಕೆಂದು ಬಯಸುತ್ತಿದ್ದಾರೆ. ಆದರೆ ಬಹುಸಂಖ್ಯಾತ ಜನರು ಸ್ನೆಹ-ಸೌಹಾರ್ದತೆಯಿಂದ ಹಾಗೂ ಸೋದರರಂತೆ ಜೀವಿಸಬೇಕೆಂದು ಆಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಭಾರತಕ್ಕೆ ಹಿಂದೂ ರಾಷ್ಟ್ರದ ಪರಿಕಲ್ಪನೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಭಾರತ ಕೇವಲ ಹಿಂದುತ್ವದ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ದೇಶದಲ್ಲಿ ಎಲ್ಲಾ ಸಮುದಾಯಗಳ ಜನರು ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಅಂತಹವರನ್ನು ಮೇಲೆತ್ತುವ ಕೆಲಸವನ್ನು ಸರ್ಕಾರ ಮಾಡಬೇಕು. ದೇಶದಲ್ಲಿ ಎಲ್ಲಾ ಜನಾಂಗ ಮತ್ತು ಸಮುದಾಯದವರು ಅಭಿವೃದ್ಧಿಯಾದರೆ ಮಾತ್ರ ಭಾರತವೂ ಸಮಗ್ರವಾಗಿ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…