ದೇಶವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲು ನಾವು ಬಿಡಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಭಾರತ ದೇಶವನ್ನು ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಬಾರದೆಂಬ ಹೇಳಿಕೆಯ ಮೂಲಕ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯಿಂದ ಕೂಡಿರುವ ದೇಶವಾಗಿದೆ. ಆದರೆ ಕೆಲ ರಾಜಕೀಯ ಗುಂಪುಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮದ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆ. ಅದನ್ನು ನಾವೆಲ್ಲರೂ ವಿರೋಧಿಸಬೇಕು. ಇಲ್ಲವಾದರೆ ಒಂದು ಧರ್ಮದ ರಾಷ್ಟ್ರವಾಗಿ ಉಳಿಯುತ್ತದೆ ಎಂದರು.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನದಲ್ಲಿ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಏಕೆಂದರೆ ಸಂವಿಧಾನದ ಪೀಠಿಕೆಯಲ್ಲಿ ಎಲ್ಲಾ ಜನಾಂಗದ ಹಾಗೂ ಧರ್ಮದ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂಬಂತೆ ಉಲ್ಲೇಖಿಸಿದೆ. ಅಲ್ಲದೇ ನಮ್ಮ ದೇಶದ ಸಂವಿಧಾನ ಕಠಿಣವಾಗಿದೆ. ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಹೊರಟಿರುವುದು ಅಪಾಯಕಾರಿಯಾಗಿದೆ. ಹೀಗಾಗಿ ಸಂವಿಧಾನವನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.

ಇನ್ನು, ಕೆಲವು ಜನರು ನಮ್ಮ ದೇಶವನ್ನು ಒಂದು ಧರ್ಮದ ರಾಷ್ಟ್ರವಾಗಬೇಕೆಂದು ಬಯಸುತ್ತಿದ್ದಾರೆ. ಆದರೆ ಬಹುಸಂಖ್ಯಾತ ಜನರು ಸ್ನೆಹ-ಸೌಹಾರ್ದತೆಯಿಂದ ಹಾಗೂ ಸೋದರರಂತೆ ಜೀವಿಸಬೇಕೆಂದು ಆಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಭಾರತಕ್ಕೆ ಹಿಂದೂ ರಾಷ್ಟ್ರದ ಪರಿಕಲ್ಪನೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಭಾರತ ಕೇವಲ ಹಿಂದುತ್ವದ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ದೇಶದಲ್ಲಿ ಎಲ್ಲಾ ಸಮುದಾಯಗಳ ಜನರು ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಅಂತಹವರನ್ನು ಮೇಲೆತ್ತುವ ಕೆಲಸವನ್ನು ಸರ್ಕಾರ ಮಾಡಬೇಕು. ದೇಶದಲ್ಲಿ ಎಲ್ಲಾ ಜನಾಂಗ ಮತ್ತು ಸಮುದಾಯದವರು ಅಭಿವೃದ್ಧಿಯಾದರೆ ಮಾತ್ರ ಭಾರತವೂ ಸಮಗ್ರವಾಗಿ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

 

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago