Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah
ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡಿದ್ದೇನೆ. ಅಲ್ಲಿ ಸ್ಥಳೀಯವಾಗಿ ಏನಾಗಿದೆ ಎಂಬುದು ಗೊತ್ತಿಲ್ಲ. ಆದರೂ ಎರಡು ಕಡೆ ನಾವು ಗೆಲ್ಲುತ್ತೇವೆ. ಎರಡು ಕಡೆಯಲ್ಲೂ ಅವರವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ನಾವು ಗೆಲ್ಲುತ್ತೇವೆ. ಮುಸ್ಲೀಂ ಮುಖಂಡರ ವಿಚಾರ ಆಗಿರುವ ಬೆಳವಣಿಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಇನ್ನು ಯತೀಂದ್ರರನ್ನು ವಸೂಲಿಗೆ ರಾಜಕೀಯಕ್ಕೆ ತಂದಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಮನೆಯವರು ಎಲ್ಲರೂ ವಸೂಲಿಗೆ ನಿಂತಿದ್ರು ಅಂತಾ ನಾನೂ ಹೇಳ್ತೀನಿ. ಕುಮಾರಸ್ವಾಮಿ ಬಳಿ ಯಾವುದು ದಾಖಲೆ ಇಲ್ಲ. ಆರೋಪ ಮಾಡೋಕೆ ಏನೂ ಇಲ್ಲ. ಹೀಗಾಗಿ ಏನೇನೋ ಮಾತಾಡ್ತಾರೆ. ನಮ್ಮ ತಂದೆಯವ್ರು ರಾಜಕಾರಣದಲ್ಲಿ ಸೋಲು ಗೆಲುವು ಎರಡನ್ನೂ ಕಂಡವ್ರು. ಹೀಗಾಗಿ ಕಣ್ಣೀರು ಹಾಕೋ ಅವಶ್ಯಕತೆ ಅವ್ರಿಗೆ ಏನಿದೆ. ನಮ್ಮ ತಂದೆ ಮುಖ್ಯಮಂತ್ರಿ ಆಗಿರೋವರೆಗೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.
ಸಚಿವ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿ ಇರ್ತಾರೆ. ಹೈಕಮಾಂಡ್ ಯಾರು ಸಚಿವರಾಗಬೇಕು ಅನ್ನೋದನ್ನ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…