Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah
ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡಿದ್ದೇನೆ. ಅಲ್ಲಿ ಸ್ಥಳೀಯವಾಗಿ ಏನಾಗಿದೆ ಎಂಬುದು ಗೊತ್ತಿಲ್ಲ. ಆದರೂ ಎರಡು ಕಡೆ ನಾವು ಗೆಲ್ಲುತ್ತೇವೆ. ಎರಡು ಕಡೆಯಲ್ಲೂ ಅವರವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ನಾವು ಗೆಲ್ಲುತ್ತೇವೆ. ಮುಸ್ಲೀಂ ಮುಖಂಡರ ವಿಚಾರ ಆಗಿರುವ ಬೆಳವಣಿಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಇನ್ನು ಯತೀಂದ್ರರನ್ನು ವಸೂಲಿಗೆ ರಾಜಕೀಯಕ್ಕೆ ತಂದಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಮನೆಯವರು ಎಲ್ಲರೂ ವಸೂಲಿಗೆ ನಿಂತಿದ್ರು ಅಂತಾ ನಾನೂ ಹೇಳ್ತೀನಿ. ಕುಮಾರಸ್ವಾಮಿ ಬಳಿ ಯಾವುದು ದಾಖಲೆ ಇಲ್ಲ. ಆರೋಪ ಮಾಡೋಕೆ ಏನೂ ಇಲ್ಲ. ಹೀಗಾಗಿ ಏನೇನೋ ಮಾತಾಡ್ತಾರೆ. ನಮ್ಮ ತಂದೆಯವ್ರು ರಾಜಕಾರಣದಲ್ಲಿ ಸೋಲು ಗೆಲುವು ಎರಡನ್ನೂ ಕಂಡವ್ರು. ಹೀಗಾಗಿ ಕಣ್ಣೀರು ಹಾಕೋ ಅವಶ್ಯಕತೆ ಅವ್ರಿಗೆ ಏನಿದೆ. ನಮ್ಮ ತಂದೆ ಮುಖ್ಯಮಂತ್ರಿ ಆಗಿರೋವರೆಗೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.
ಸಚಿವ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿ ಇರ್ತಾರೆ. ಹೈಕಮಾಂಡ್ ಯಾರು ಸಚಿವರಾಗಬೇಕು ಅನ್ನೋದನ್ನ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…