ಮೈಸೂರು ನಗರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಎರಡನೇ ತಂಡದ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು.

ನಿನ್ನೆ ಸಂಜೆ ಕಾಡಿನಿಂದ ಮೈಸೂರು ಅರಮನೆಗೆ ಎರಡನೇ ಹಂತದ ದಸರಾ ಗಜಪಡೆ ಆಗಮಿಸಿದ್ದು, ಇಂದು ಅವುಗಳಿಗೆ ತೂಕ ಪರೀಕ್ಷೆ ನಡೆಸಲಾಯಿತು.

ಮೈಸೂರು ನಗರದ ಧನ್ವಂತ್ರಿ ರಸ್ತೆಯಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ನಡೆದ ಆನೆಗಳ ತೂಕ ಪರಿಶೀಲನೆಯಲ್ಲಿ ಹೇಮಾವತಿ 2440 ಕೆಜಿ, ಶ್ರೀಕಂಠ 5540 ಕೆಜಿ, ಸುಗ್ರೀವ 5545 ಕೆಜಿ, ರೂಪ 3320 ಕೆಜಿ ಹಾಗೂ ಗೋಪಿ 4990 ಕೆಜಿ ತೂಕವಿದೆ.

ತೂಕ ಪರಿಶೀಲನೆ ನಂತರ ಆನೆಗಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಸರಾ ಗಜಪಡೆಗಳು ಜಂಬೂಸವಾರಿ ಮೆರವಣಿಗೆಗೆ ತಾಲೀಮು ನಡೆಸಲಿದ್ದು, ಬೆಳಿಗ್ಗೆ ಸಂಜೆ ಎರಡು ಸಮಯವೂ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ನಡೆಸಲಾಗುತ್ತದೆ.

ನಗರದ ಸದ್ದುಗದ್ದಲಕ್ಕೆ ವಿಚಲಿತವಾಗದಂತೆ ಎಲ್ಲಾ ಆನೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಜಂಬೂಸವಾರಿ ಮೆರವಣಿಗೆಗೆ ಎಲ್ಲಾ ರೀತಿಯಲ್ಲೂ ತಯಾರಿ ನಡೆಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

2 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

3 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

4 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

8 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

9 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

15 hours ago