prathap simha
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.
ರಾಜ್ಯ ಬಜೆಟ್ ವಿಚಾರ ಕುರಿತು ನಗರದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಅಧಿಕಾರಿಗಳು 17 ಬಾರಿ ಬರೆದು ಕೊಟ್ಟ ಬಜೆಟ್ ಓದಿದ್ದಾರೆ ಅಷ್ಟೆ. 17 ಬಜೆಟ್ ನಲ್ಲಿ ಸಿದ್ದರಾಮಯ್ಯನವರು ಇಡೀ ಮೈಸೂರಿನ ಜನ ನೆನಪಿಕೊಟ್ಟುಕೊಳ್ಳುವಂತಹ ಒಂದು ಕೆಲಸ ಮಾಡಿದ್ದಾರಾ? ಎಂದು ಕೇಳಿದರು.
ಮೂರೇ ಮೂರು ವರ್ಷಗಳಲ್ಲಿ ಶಿವಮೊಗ್ಗವನ್ನು ದೊಡ್ಡ ಮಟ್ಟದಲ್ಲಿ ಯಡಿಯೂರಪ್ಪ ಅಭಿವೃದ್ಧಿ ಮಾಡಿದ್ದಾರೆ. ಶಿವಮೊಗ್ಗದ ಜನ ತಲೆ ತಲಾಂತರ ನೆನಪಿಟ್ಟುಕೊಳ್ಳುವಂತೆ ಯಡಿಯೂರಪ್ಪ ಶಿವಮೊಗ್ಗ ಅಭಿವೃದ್ಧಿ ಮಾಡಿದ್ದಾರೆ. 17 ಬಾರಿ ಬಜೆಟ್ ಮಾಡಿದ ಸಿದ್ದರಾಮಯ್ಯ ಮೈಸೂರಿಗೆ ಏನು ಮಾಡಿದ್ದಾರೆ ಹೇಳಲಿ ಎಂದು ಆಗ್ರಹಿಸಿದರು.
ಫಿಲಂಸಿಟಿ ಅನ್ನೋದು ಮೆಗಾ ಸೀರಿಯಲ್ ಕಥೆ ಆಗಿದೆ ಅಷ್ಟೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇನ್ನೂ ಒಂದು ತಿಂಗಳು ಇರುತ್ತಾರೋ ಅಥವಾ ಗುದ್ದಾಡುತ್ತಾ ಅಧಿಕಾರ ಸಂಪೂರ್ಣ ಮಾಡುತ್ತಾರೋ ಗೊತ್ತಿಲ್ಲ. ಯಡಿಯೂರಪ್ಪರ ರೀತಿ ಸಿದ್ದರಾಮಯ್ಯ ಮೈಸೂರಿಗೆ ಮಾಡಿರುವ ಒಂದು ಘನ ಕಾರ್ಯ ಹೇಳಲಿ ಎಂದರು.
ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದ್ದು ಯಡಿಯೂರಪ್ಪ. ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆ ಘೋಷಣೆ ಮಾಡಿದ್ದು ಯಡಿಯೂರಪ್ಪ. ಕಿದ್ವಾಯಿ ಕಟ್ಟಡಕ್ಕೆ ಹಣ ಕೊಟ್ಟಿದ್ದು ಬಸವರಾಜ ಬೊಮ್ಮಾಯಿ. ಮೈಸೂರಿನಲ್ಲಿ ಮುಂದಿನ ತಲೆ ಮಾರು ಸಿದ್ದರಾಮಯ್ಯ ಹೆಸರು ಹೇಳುವಂತ ಒಂದು ಕೆಲಸ ಇದ್ಯಾ ಹೇಳಿ ಎಂದು ಅವರು ಪ್ರಶ್ನಿಸಿದರು.
ಯಾಕಾಗಿ ಜನ ಸಿದ್ದರಾಮಯ್ಯರನ್ನು ನೆನಪಿಸಿಕೊಳ್ಳಬೇಕು? ಅಭಿವೃದ್ಧಿ ಕಲ್ಪನೆಯೆ ಸಿದ್ದರಾಮಯ್ಯಗೆ ಇಲ್ಲ. ಬೆಂಗಳೂರು-ಮೈಸೂರು ಹೈವೆ ರಸ್ತೆ ಸಿದ್ದರಾಮಯ್ಯ ಮಾಡಿದ್ದಾ? ಮೈಸೂರು ರಿಂಗ್ ರಸ್ತೆ ಮಾಡಿದ್ದು ಸಿದ್ದರಾಮಯ್ಯನಾ? ಮೈಸೂರಿಗೆ ಸಿದ್ದರಾಮಯ್ಯರ ಒಂದೇ ಒಂದು ಶಾಶ್ವತ ಕೊಡುಗೆ ಏನು ಹೇಳಿ ಎಂದರು.
ಬೃಹತ್ ಮಹಾ ನಗರ ಪಾಲಿಕೆ ಹೆಸರಿನಲ್ಲಿ ಸಿದ್ದರಾಮಯ್ಯ ತಮ್ಮ ತೋಟದ ಜಾಗಗಳ ಮೌಲ್ಯ ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಜಾತಿ ಬಾಂಧವರ ಜಾಗವನ್ನು ಪಾಲಿಕೆ ವ್ಯಾಪ್ತಿಗೆ ತಂದು ಆಸ್ತಿ ಮೌಲ್ಯ ಹೆಚ್ಚಳ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಆಯುಕ್ತರ ಮನೆ ಮುಂದೆ ಹಾಕುತ್ತೇವೆ : ನಗರದಲ್ಲಿ ಫ್ಲೆಕ್ಸ್ ತೆಗೆಸದಿದ್ದರೆ ನಾವೇ ಫ್ಲೆಕ್ಸ್ ಗಳನ್ನು ಕಿತ್ತು ನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಹಾಕುತ್ತೇವೆ ಎಂದು ಎಚ್ಚರಿಸಿದರು.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…