ಮೈಸೂರು ನಗರ

ಬುರುಡೆ ಪ್ರಕರಣ ಷಡ್ಯಂತರ ಎನ್ನಲು ನಾನ್ಯಾರು?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆ

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂಬುದನ್ನು ನಾವು ಹೇಳಿದ್ದೇವೆ.
ಯಾರೇ ತಪ್ಪಿತಸ್ಥರಿದ್ದರೂ ಗುರುತಿಸಿ ಶಿಕ್ಷಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ರಾಜಕೀಯಕ್ಕಾಗಿ ಆರೋಪಿ ಮಾಡಿ ಇಂತಹ ಪ್ರಯತ್ನ ಮಾಡಿರೋದು ಸರಿಯಲ್ಲ. ಧರ್ಮಸ್ಥಳದ ಪಾವಿತ್ರ್ಯತೆ ಕಾಪಾಡಿ ತನಿಖೆ ಆಗಬೇಕು ಎಂದು ಸರ್ಕಾರ ಹೇಳಿದೆ. ಆದರೆ ತನಿಖೆಯೇ ಆಗಬಾರದು ಎನ್ನಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.

ಇನ್ನು ಯಾರೋ ಒಬ್ಬ ನ್ಯಾಯಾಧೀಶರ ವಿರುದ್ಧ 164 ಹೇಳಿಕೆ ದಾಖಲಿಸಿದ್ದ. ಪೊಲೀಸರು ತನಿಖೆ ಮಾಡಿ ಬೇರೆ ಬೇರೆ ಅಂಶಗಳು ಇಂದು ಹೊರ ಬಂದಿರುವ ಸಾಧ್ಯತೆ ಇದೆ. ದೂರು ಕೊಟ್ಟವರಿಗೂ ಜವಾಬ್ದಾರಿ ಇದೆ. ಸುಳ್ಳು ದೂರು ಕೊಟ್ಟು, ಇಂತಹ ವಾತಾವರಣ ಸೃಷ್ಟಿ ಮಾಡಿದ್ದರೆ ಅದು ಅಪರಾಧ. ಅದಕ್ಕಾಗಿ ದೂರುದಾರನನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಯಿಂದಲೇ ಸತ್ಯ ಹೊರ ಬರಲು ಸಾಧ್ಯ ಆಗಿದೆ. ತಪ್ಪಿತಸ್ಥರು ಯಾರೆಂದು ಗುರುತಿಸಲು ಯಾರಿಂದಲೂ ಸಾಧ್ಯವಿಲ್ಲ. ತನಿಖೆಯಿಂದಲೇ ಅದೆಲ್ಲವೂ ಬೆಳಕಿಗೆ ಬರಬೇಕು. ದೂರುದಾರರೂ ತಪ್ಪಿತಸ್ಥರಾಗಿರಬಹುದು ಎಂದು ಇಂದು ಗೊತ್ತಾಗುತ್ತಿದೆ. ಎಸ್‌ಐಟಿ ಪೂರ್ಣವಾದ ಶ್ರಮ ವಹಿಸಿ ತನಿಖೆ ಮಾಡಿದೆ. ಯಾರೇ ತಪಿತಸ್ಥರಿದ್ದರೂ ಗುರುತಿಸುವ ಕೆಲಸ ಇಂದು ಆಗಿದೆ.

ಷಡ್ಯಂತರ ಯಾರು ಮಾಡಿದ್ದಾರೆ ಅದು ಹೊರಗೆ ಬರಲಿ. ಬಿಜೆಪಿಯವರಿಗೆ ಯಾಕೆ ಭಯ. ನಾವೆಲ್ಲ ಧರ್ಮಸ್ಥಳ ಭಕ್ತರಲ್ಲವಾ. ರಾಜಕಾರಣ ಮಾಡಲು ಇವರು ಧರ್ಮಸ್ಥಳಕ್ಕೆ ಹೋಗಿದ್ದಾರೆ. ಎಸ್‌ಐಟಿಯನ್ನ ಹೆಗಡೆಯವರೇ ಸ್ವಾಗತ ಮಾಡಿದ್ದಾರೆ. ಇದರಲ್ಲಿ ಬಿಜೆಪಿ ಯಾಕೆ ಕಡ್ಡಿ ಆಡಿಸುವ ಕೆಲಸ ಮಾಡುತ್ತಿದೆ.

ಧರ್ಮಸ್ಥಳ ಕಾರಣಕ್ಕೆ ಮಾಧ್ಯಮದವರಿಗೆ ಇಷ್ಟೊಂದು ಕಾಳಜಿ ಇರಬಹುದು. ಪೊಲೀಸರ ವಿಚಾರದಲ್ಲಿ ದೂರು ಎಂಬುದು ದೂರೆ. ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಎಂಬುದು ಹೊರ ಬರುತ್ತೆ. ಧಾರ್ಮಿಕ ಭಾವನೆ ಕೆರಳಿಸಿ ರಾಜಕಾರಣ ಮಾಡುವಂತಹದು ಒಂದೇ ಗುಂಪು. ಇತಿಹಾಸದಲ್ಲಿ ಇಂತಹ ಪ್ರಕರಣಗಳ ಹಿಂದೆ ಯಾರಿದ್ದಾರೆ ಎಂಬುದು ಬಂದಿದೆ.

ಇದರಲ್ಲೂ ಸತ್ಯಾಂಶ ಹೊರ ಬರುತ್ತದೆ. ಬುರುಡೆ ಪ್ರಕರಣ ಷಡ್ಯಂತರ ಎನ್ನಲು ನಾನ್ಯಾರು? ಎಂದು ಪ್ರಶ್ನೆ ಮಾಡಿದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರಕ್ಕೆ ಕಪ್ಪು ಚುಕ್ಕೆ ತರುವ ಕೆಲಸ ಯಾರು ಮಾಡಿದ್ದಾರೆ. ಸುಳ್ಳು ದೂರು ಕೊಟ್ಟು, ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಿರುವವರ ಮೇಲೆಲ್ಲಾ ಕ್ರಮ ಆಗುತ್ತೆ. ಸುಜಾತ ಭಟ್ ವಶಕ್ಕೆ ಪಡೆಯುವ ವಿಚಾರ ಪೊಲೀಸರಿಗೆ ಬಿಟ್ಟಿದ್ದು. ಕಾನೂನುಬದ್ಧವಾಗಿ ಪೊಲೀಸರು ಕೆಲಸ ಮಾಡಬೇಕು. ಯಾವುದೋ ಒಂದು ಗುಂಪಿನ ಕೈವಾಡ ಇದೆ ಎಂಬುದು ಕಾಣುತ್ತಿದೆ‌. ಇದೆಲ್ಲವನ್ನೂ ತನಿಖೆ ಸಂಸ್ಥೆಗೆ ಬಿಡುವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟರು.

ಆಂದೋಲನ ಡೆಸ್ಕ್

Recent Posts

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

3 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

4 hours ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

4 hours ago