ಮೈಸೂರು ನಗರ

ಬುರುಡೆ ಪ್ರಕರಣ ಷಡ್ಯಂತರ ಎನ್ನಲು ನಾನ್ಯಾರು?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆ

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕಾನೂನು ಸಲಹೆಗಾರ ಹಾಗೂ ಶಾಸಕ ಪೊನ್ನಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂಬುದನ್ನು ನಾವು ಹೇಳಿದ್ದೇವೆ.
ಯಾರೇ ತಪ್ಪಿತಸ್ಥರಿದ್ದರೂ ಗುರುತಿಸಿ ಶಿಕ್ಷಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ರಾಜಕೀಯಕ್ಕಾಗಿ ಆರೋಪಿ ಮಾಡಿ ಇಂತಹ ಪ್ರಯತ್ನ ಮಾಡಿರೋದು ಸರಿಯಲ್ಲ. ಧರ್ಮಸ್ಥಳದ ಪಾವಿತ್ರ್ಯತೆ ಕಾಪಾಡಿ ತನಿಖೆ ಆಗಬೇಕು ಎಂದು ಸರ್ಕಾರ ಹೇಳಿದೆ. ಆದರೆ ತನಿಖೆಯೇ ಆಗಬಾರದು ಎನ್ನಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.

ಇನ್ನು ಯಾರೋ ಒಬ್ಬ ನ್ಯಾಯಾಧೀಶರ ವಿರುದ್ಧ 164 ಹೇಳಿಕೆ ದಾಖಲಿಸಿದ್ದ. ಪೊಲೀಸರು ತನಿಖೆ ಮಾಡಿ ಬೇರೆ ಬೇರೆ ಅಂಶಗಳು ಇಂದು ಹೊರ ಬಂದಿರುವ ಸಾಧ್ಯತೆ ಇದೆ. ದೂರು ಕೊಟ್ಟವರಿಗೂ ಜವಾಬ್ದಾರಿ ಇದೆ. ಸುಳ್ಳು ದೂರು ಕೊಟ್ಟು, ಇಂತಹ ವಾತಾವರಣ ಸೃಷ್ಟಿ ಮಾಡಿದ್ದರೆ ಅದು ಅಪರಾಧ. ಅದಕ್ಕಾಗಿ ದೂರುದಾರನನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಯಿಂದಲೇ ಸತ್ಯ ಹೊರ ಬರಲು ಸಾಧ್ಯ ಆಗಿದೆ. ತಪ್ಪಿತಸ್ಥರು ಯಾರೆಂದು ಗುರುತಿಸಲು ಯಾರಿಂದಲೂ ಸಾಧ್ಯವಿಲ್ಲ. ತನಿಖೆಯಿಂದಲೇ ಅದೆಲ್ಲವೂ ಬೆಳಕಿಗೆ ಬರಬೇಕು. ದೂರುದಾರರೂ ತಪ್ಪಿತಸ್ಥರಾಗಿರಬಹುದು ಎಂದು ಇಂದು ಗೊತ್ತಾಗುತ್ತಿದೆ. ಎಸ್‌ಐಟಿ ಪೂರ್ಣವಾದ ಶ್ರಮ ವಹಿಸಿ ತನಿಖೆ ಮಾಡಿದೆ. ಯಾರೇ ತಪಿತಸ್ಥರಿದ್ದರೂ ಗುರುತಿಸುವ ಕೆಲಸ ಇಂದು ಆಗಿದೆ.

ಷಡ್ಯಂತರ ಯಾರು ಮಾಡಿದ್ದಾರೆ ಅದು ಹೊರಗೆ ಬರಲಿ. ಬಿಜೆಪಿಯವರಿಗೆ ಯಾಕೆ ಭಯ. ನಾವೆಲ್ಲ ಧರ್ಮಸ್ಥಳ ಭಕ್ತರಲ್ಲವಾ. ರಾಜಕಾರಣ ಮಾಡಲು ಇವರು ಧರ್ಮಸ್ಥಳಕ್ಕೆ ಹೋಗಿದ್ದಾರೆ. ಎಸ್‌ಐಟಿಯನ್ನ ಹೆಗಡೆಯವರೇ ಸ್ವಾಗತ ಮಾಡಿದ್ದಾರೆ. ಇದರಲ್ಲಿ ಬಿಜೆಪಿ ಯಾಕೆ ಕಡ್ಡಿ ಆಡಿಸುವ ಕೆಲಸ ಮಾಡುತ್ತಿದೆ.

ಧರ್ಮಸ್ಥಳ ಕಾರಣಕ್ಕೆ ಮಾಧ್ಯಮದವರಿಗೆ ಇಷ್ಟೊಂದು ಕಾಳಜಿ ಇರಬಹುದು. ಪೊಲೀಸರ ವಿಚಾರದಲ್ಲಿ ದೂರು ಎಂಬುದು ದೂರೆ. ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಎಂಬುದು ಹೊರ ಬರುತ್ತೆ. ಧಾರ್ಮಿಕ ಭಾವನೆ ಕೆರಳಿಸಿ ರಾಜಕಾರಣ ಮಾಡುವಂತಹದು ಒಂದೇ ಗುಂಪು. ಇತಿಹಾಸದಲ್ಲಿ ಇಂತಹ ಪ್ರಕರಣಗಳ ಹಿಂದೆ ಯಾರಿದ್ದಾರೆ ಎಂಬುದು ಬಂದಿದೆ.

ಇದರಲ್ಲೂ ಸತ್ಯಾಂಶ ಹೊರ ಬರುತ್ತದೆ. ಬುರುಡೆ ಪ್ರಕರಣ ಷಡ್ಯಂತರ ಎನ್ನಲು ನಾನ್ಯಾರು? ಎಂದು ಪ್ರಶ್ನೆ ಮಾಡಿದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರಕ್ಕೆ ಕಪ್ಪು ಚುಕ್ಕೆ ತರುವ ಕೆಲಸ ಯಾರು ಮಾಡಿದ್ದಾರೆ. ಸುಳ್ಳು ದೂರು ಕೊಟ್ಟು, ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಿರುವವರ ಮೇಲೆಲ್ಲಾ ಕ್ರಮ ಆಗುತ್ತೆ. ಸುಜಾತ ಭಟ್ ವಶಕ್ಕೆ ಪಡೆಯುವ ವಿಚಾರ ಪೊಲೀಸರಿಗೆ ಬಿಟ್ಟಿದ್ದು. ಕಾನೂನುಬದ್ಧವಾಗಿ ಪೊಲೀಸರು ಕೆಲಸ ಮಾಡಬೇಕು. ಯಾವುದೋ ಒಂದು ಗುಂಪಿನ ಕೈವಾಡ ಇದೆ ಎಂಬುದು ಕಾಣುತ್ತಿದೆ‌. ಇದೆಲ್ಲವನ್ನೂ ತನಿಖೆ ಸಂಸ್ಥೆಗೆ ಬಿಡುವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

10 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

10 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

10 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

11 hours ago