ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಮ್ಮದ್ ಶಫಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಶಬ್ರಿನ್ ತಾಜ್, ಪ್ರಿಯಕರ ಅನ್ವರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 12 ವರ್ಷಗಳ ಹಿಂದೆ ಶಬ್ರೀನ್ ಹಾಗೂ ಮಹಮ್ಮದ್ ಶಫಿ ಮದುವೆಯಾಗಿದ್ದರು. ಈ ಮಧ್ಯೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್: ಕೂದಲೆಳೆ ಅಂತರದಲ್ಲಿ ಪಾರು
ಈ ಮಧ್ಯೆ ಪತ್ನಿ ಶಬ್ರಿನ್ಗೆ ಅನ್ವರ್ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ಮಧ್ಯೆ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತಿ ಮಹಮ್ಮದ್ ಶಫಿಯನ್ನು ಪತ್ನಿ ಶಬ್ರಿನ್ ಹಾಗೂ ಪ್ರಿಯಕರ ಅನ್ವರ್ ಇಬ್ಬರು ಸೇರಿ ಮಲಗಿದ್ದ ವೇಳೆ ಕುತ್ತಿಗೆಗೆ ಮೊಬೈಲ್ ಚಾರ್ಜ್ ವೈರ್ ಬಿಗಿದು ಕೊಲೆ ಮಾಡಿದ್ದಾರೆ.
ಇದನ್ನೂ ಓದಿ:- ಮೈಸೂರು| ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಬೃಹತ್ ಪ್ರತಿಭಟನೆ
ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಕೆ.ಆರ್.ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…