ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಜಯನಗರ 2ನೇ ಹಂತದಲ್ಲಿ ಸಿಎಂ ಸಿದ್ದರಾಮಯ್ಯ 1997-99ರಲ್ಲಿ ನಿರ್ಮಿಸಿ ಮಾರಾಟ ಮಾಡಿದ ಮನೆಯ ಪ್ರತಿಯೊಂದು ದಾಖಲೆಗಳು ಸಕ್ರಮವಾಗಿವೆ.
ಅಲ್ಲಿದ್ದ ನಿವೇಶನವನ್ನು ಸಿಎಂ ಸಿದ್ದರಾಮಯ್ಯ ಅವರು ಪಾಪಣ್ಣ ಕುಟುಂಬದವರಿಂದ ಖರೀದಿ ಮಾಡಿದ್ದರು. ಆ ಜಮೀನನ್ನು ಮುಡಾ ನೋಟಿಫೈ ಮಾಡಿಲ್ಲ. ಸುಪ್ರೀಂ ಕೂಡ ಸಿದ್ದರಾಮಯ್ಯ ಪರ ತೀರ್ಪು ನೀಡಿದೆ. ಇದೆಲ್ಲದರ ನಡುವೆ ಇಲ್ಲಿ ಅಕ್ರಮ ಆಗಿದೆ ಎನ್ನುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟನೆ ನೀಡಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬರೀ ಇಲ್ಲಸಲ್ಲದ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಒಂದು ವೇಳೆ ಈ ಆರೋಪವನ್ನು ಸಾಬೀತು ಮಾಡಿದರೆ ನಾನೇ ಸಿಎಂ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ. ಇಲ್ಲದಿದ್ದರೆ ಕೇಂದ್ರ ಸಚಿವ ಸ್ಥಾನಕ್ಕೆ ಎಚ್ಡಿಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…