ಮೈಸೂರು ನಗರ

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ಅರುಣ್ ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ತಾಲ್ಲೂಕು ಪಂಚಾಯತ್ ವತಿಯಿಂದ ಇಲವಾಲ ಗ್ರಾಮದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ” ಹಾಗೂ “ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ. ಬಡವರು ಹಾಗೂ ಮಹಿಳೆಯರ ಏಳಿಗೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ. ಕುಟುಂಬ ನಿರ್ವಹಣೆಯ ಜೊತೆಗೆ ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಬಿ.ಸವಿತಾ ಮಾತನಾಡಿ, ಮಹಿಳೆಯರು ತಮ್ಮ ಸಾಮಾರ್ಥ್ಯದಿಂದ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಜವಬ್ದಾರಿಯನ್ನು ಸಮರ್ಥವಾಗಿ ನಿಭಾಹಿಸುತ್ತಿದ್ದಾರೆ. ಯಾವುದೇ ಹಿಂಜರಿಕೆಗೆ ಒಳಗಾಗಬಾರದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ಮಾತನಾಡಿ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅನೇಕರು ಸ್ವಾವಲಂಭಿ ಜೀವನ ನಡೆಸುತ್ತಿದ್ದಾರೆ. ಮಹಿಳೆಯರ ಜೀವನ ಸುಧಾರಣೆ ಕಂಡಿದೆ. ಪ್ರತಿಯೊಂದು ಕುಟುಂಬವು ನೆಮ್ಮದಿಯಿಂದ ಬದುಕುವಂತಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಮಾತನಾಡಿ, ಪ್ರಕೃತಿ ಸ್ವರೂಪಿಯಾದ ಮಹಿಳೆಯರು ಉತ್ತಮ ಸಮಾಜ ನಿರ್ಮಾಣ ಮಾಡುದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ನಮ್ಮ ಗ್ರಾಮೀಣ ಭಾಗದ ಮಹಿಳೆಯರು ಕೀಳಿರಿಮೆ ಬೆಳೆಸಿಕೊಳ್ಳದೆ ಆತ್ಮವಿಶ್ವಾಸದಿಂದ ಬದುಕಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಬಿ.ಕರೀಗೌಡ, ಬಸವಣ್ಣ, ತಾಲ್ಲೂಕು ಸಮಿತಿಯ ಸದಸ್ಯರಾದ ಚನ್ನಪ್ಪ, ಕರೀಗೌಡ, ರಾಣಿ, ನವೀನ್, ಗ್ರಾಮಾಂತರ ಸಿಡಿಪಿಒ ತಿಮ್ಮಯ್ಯ, ಆಹಾರ ಶಿರಸ್ತೆದಾರ್ ಮಹೇಶ್ ಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಣಿ, ಆಹಾರ ನಿರೀಕ್ಷಕರಾದ ನಂದಿನಿ, ಇಲವಾಲ ಗ್ರಾ.ಪಂ. ಪಿಡಿಒ ಹೇಮಂತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

ಗ್ಯಾರಂಟಿ ಯೋಜನೆ ಫಲಾನುಭವಿ ರತ್ನಮ್ಮ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಹಸು ಖರೀದಿಸಿದ್ದೇನೆ. ಇದರಿಂದ ನಮ್ಮ ಕುಟುಂಬ ನಿರ್ವಹಣೆ ಸುಧಾರಿಸಿದೆ. ಭೂರಹಿತರಾದ ನಮಗೆ ಅನ್ನಭಾಗ್ಯದಿಂದ ಹೊಟ್ಟೆತುಂಬ ಊಟ ಮಾಡುವಂತಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣದ ಹಣ ಉಳಿತಾಯವಾಗುತ್ತಿದೆ‌. ಗ್ಯಾರಂಟಿ ಯೋಜನೆಯಿಂದ ನಮಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago