ಮೈಸೂರು ನಗರ

ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಖಾತರಿಪಡಿಸಬೇಕು : ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ ನೀಡಲಾಯಿತು.

ಆಂದೋಲನ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷೆ ನಳಿನ, ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮೂಹ ಮಾಧ್ಯಮಗಳಲ್ಲಿ ಅಶ್ಲೀಲತೆ ಮತ್ತು ಕ್ರೌರ್ಯತೆಯನ್ನು ನಿಷೇಧ ಮಾಡಬೇಕು. ಮಹಿಳೆಯರಿಗೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗವನ್ನು ಖಾತರಿಪಡಿಸಬೇಕು. ಈ ಬೇಡಿಕೆಗಳನ್ನು ಈಡೇರುವವರೆಗೂ ಮಹಿಳೆಯರು, ಜನಸಾಮಾನ್ಯರು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಜಿಲ್ಲಾ ಉಪಾಧ್ಯಕ್ಷೆ ಜಿ.ಎಸ್.ಸೀಮಾ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಹಿಳೆಯರ ಕುರಿತು ಯಾವುದೇ ಕಾಳಜಿ ಇಲ್ಲ. ಇತ್ತೀಚೆಗೆ ಪತ್ರಿಕೆಗಳಲ್ಲಿ ವರದಿಯಾದಂತೆ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ೮೦ ಸಾವಿರ ಬಾಲ ಗರ್ಭಿಣಿಯರು ಕಂಡು ಬಂದಿರುವುದು, ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಅಸಹಜ ಸಾವುಗಳು, ಹೆಣ್ಣು ಮಕ್ಕಳ ಕಳ್ಳ ಸಾಗಾಣಿಕೆ , ಅಶ್ಲೀಲ ಸಿನಿಮಾ -ಸಾಹಿತ್ಯಗಳಿಗೆ ಕಡಿವಾಣ ಹಾಕದೆ ಇರುವುದು, ಮದ್ಯದ ಅಂಗಡಿಗಳನ್ನು ನಿಷೇಽಸುವ ಬದಲು, ಪರವಾನಗಿಯನ್ನು ಕೊಡುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ರಂಗಕರ್ಮಿ ಪ್ರಸನ್ನ, ಹಿರಿಯ ರಂಗಕಲಾವಿದೆ ರಾಮೇಶ್ವರಿ ವರ್ಮ, ವಿಶ್ರಾಂತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ, ಲೇಖಕಿ ಸುನಂದಮ್ಮ ಅವರನ್ನು ನಿಯೋಗವೊಂದು ಭೇಟಿ ಮಾಡಿದ್ದು, ಪತ್ರಕ್ಕೆ ಸಹಿ ಹಾಕುವುದರ ಮೂಲಕ ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಕಚೇರಿ ಕಾರ್ಯದರ್ಶಿ ಉ.ಪುಷ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಆಸಿಯಾ ಬೇಗಂ, ಸದಸ್ಯರಾದ ಸಿಂಧು ಗೌರಿ, ಪದ್ಮ, ಗಾಯತ್ರಿ, ತುಳಸಿ , ಸುಮಾ, ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

21 mins ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

1 hour ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

2 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

2 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

2 hours ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

3 hours ago