ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ ನೀಡಲಾಯಿತು.
ಆಂದೋಲನ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷೆ ನಳಿನ, ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮೂಹ ಮಾಧ್ಯಮಗಳಲ್ಲಿ ಅಶ್ಲೀಲತೆ ಮತ್ತು ಕ್ರೌರ್ಯತೆಯನ್ನು ನಿಷೇಧ ಮಾಡಬೇಕು. ಮಹಿಳೆಯರಿಗೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗವನ್ನು ಖಾತರಿಪಡಿಸಬೇಕು. ಈ ಬೇಡಿಕೆಗಳನ್ನು ಈಡೇರುವವರೆಗೂ ಮಹಿಳೆಯರು, ಜನಸಾಮಾನ್ಯರು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದರು.
ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ
ಜಿಲ್ಲಾ ಉಪಾಧ್ಯಕ್ಷೆ ಜಿ.ಎಸ್.ಸೀಮಾ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಹಿಳೆಯರ ಕುರಿತು ಯಾವುದೇ ಕಾಳಜಿ ಇಲ್ಲ. ಇತ್ತೀಚೆಗೆ ಪತ್ರಿಕೆಗಳಲ್ಲಿ ವರದಿಯಾದಂತೆ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ೮೦ ಸಾವಿರ ಬಾಲ ಗರ್ಭಿಣಿಯರು ಕಂಡು ಬಂದಿರುವುದು, ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಅಸಹಜ ಸಾವುಗಳು, ಹೆಣ್ಣು ಮಕ್ಕಳ ಕಳ್ಳ ಸಾಗಾಣಿಕೆ , ಅಶ್ಲೀಲ ಸಿನಿಮಾ -ಸಾಹಿತ್ಯಗಳಿಗೆ ಕಡಿವಾಣ ಹಾಕದೆ ಇರುವುದು, ಮದ್ಯದ ಅಂಗಡಿಗಳನ್ನು ನಿಷೇಽಸುವ ಬದಲು, ಪರವಾನಗಿಯನ್ನು ಕೊಡುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯ ರಂಗಕರ್ಮಿ ಪ್ರಸನ್ನ, ಹಿರಿಯ ರಂಗಕಲಾವಿದೆ ರಾಮೇಶ್ವರಿ ವರ್ಮ, ವಿಶ್ರಾಂತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ, ಲೇಖಕಿ ಸುನಂದಮ್ಮ ಅವರನ್ನು ನಿಯೋಗವೊಂದು ಭೇಟಿ ಮಾಡಿದ್ದು, ಪತ್ರಕ್ಕೆ ಸಹಿ ಹಾಕುವುದರ ಮೂಲಕ ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕಚೇರಿ ಕಾರ್ಯದರ್ಶಿ ಉ.ಪುಷ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಆಸಿಯಾ ಬೇಗಂ, ಸದಸ್ಯರಾದ ಸಿಂಧು ಗೌರಿ, ಪದ್ಮ, ಗಾಯತ್ರಿ, ತುಳಸಿ , ಸುಮಾ, ಇನ್ನಿತರರು ಹಾಜರಿದ್ದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…