ಮೈಸೂರು ನಗರ

ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಖಾತರಿಪಡಿಸಬೇಕು : ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ ನೀಡಲಾಯಿತು.

ಆಂದೋಲನ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷೆ ನಳಿನ, ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮೂಹ ಮಾಧ್ಯಮಗಳಲ್ಲಿ ಅಶ್ಲೀಲತೆ ಮತ್ತು ಕ್ರೌರ್ಯತೆಯನ್ನು ನಿಷೇಧ ಮಾಡಬೇಕು. ಮಹಿಳೆಯರಿಗೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗವನ್ನು ಖಾತರಿಪಡಿಸಬೇಕು. ಈ ಬೇಡಿಕೆಗಳನ್ನು ಈಡೇರುವವರೆಗೂ ಮಹಿಳೆಯರು, ಜನಸಾಮಾನ್ಯರು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದರು.

ಇದನ್ನೂ ಓದಿ:-ಬೆಂಗಳೂಲ್ಲಿ 300 ಎಕರೆ ಜಮೀನು ಖರೀದಿಸಿದ್ದ ಧರ್ಮೆಂದ್ರ

ಜಿಲ್ಲಾ ಉಪಾಧ್ಯಕ್ಷೆ ಜಿ.ಎಸ್.ಸೀಮಾ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಹಿಳೆಯರ ಕುರಿತು ಯಾವುದೇ ಕಾಳಜಿ ಇಲ್ಲ. ಇತ್ತೀಚೆಗೆ ಪತ್ರಿಕೆಗಳಲ್ಲಿ ವರದಿಯಾದಂತೆ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ೮೦ ಸಾವಿರ ಬಾಲ ಗರ್ಭಿಣಿಯರು ಕಂಡು ಬಂದಿರುವುದು, ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಅಸಹಜ ಸಾವುಗಳು, ಹೆಣ್ಣು ಮಕ್ಕಳ ಕಳ್ಳ ಸಾಗಾಣಿಕೆ , ಅಶ್ಲೀಲ ಸಿನಿಮಾ -ಸಾಹಿತ್ಯಗಳಿಗೆ ಕಡಿವಾಣ ಹಾಕದೆ ಇರುವುದು, ಮದ್ಯದ ಅಂಗಡಿಗಳನ್ನು ನಿಷೇಽಸುವ ಬದಲು, ಪರವಾನಗಿಯನ್ನು ಕೊಡುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ರಂಗಕರ್ಮಿ ಪ್ರಸನ್ನ, ಹಿರಿಯ ರಂಗಕಲಾವಿದೆ ರಾಮೇಶ್ವರಿ ವರ್ಮ, ವಿಶ್ರಾಂತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ, ಲೇಖಕಿ ಸುನಂದಮ್ಮ ಅವರನ್ನು ನಿಯೋಗವೊಂದು ಭೇಟಿ ಮಾಡಿದ್ದು, ಪತ್ರಕ್ಕೆ ಸಹಿ ಹಾಕುವುದರ ಮೂಲಕ ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಕಚೇರಿ ಕಾರ್ಯದರ್ಶಿ ಉ.ಪುಷ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಆಸಿಯಾ ಬೇಗಂ, ಸದಸ್ಯರಾದ ಸಿಂಧು ಗೌರಿ, ಪದ್ಮ, ಗಾಯತ್ರಿ, ತುಳಸಿ , ಸುಮಾ, ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

22 mins ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

29 mins ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

1 hour ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

1 hour ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

1 hour ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago