ಮೈಸೂರು ನಗರ

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು. ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಅಧಿಕಾರಿಗಳು ನಿಯಮಿತವಾಗಿ ದಾಳಿ ನಡೆಸಿ ಪತ್ತೆಯಾಗುವ ಬಾಲ ಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ಪುನಃ ಶಾಲೆಗೆ ದಾಖಲಿಸಬೇಕು, ಅವರು ವಿದ್ಯಾಭ್ಯಾಸ ಮುಂದುವರಿಸಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಬಾಲ ಕಾರ್ಮಿಕರ ಪೋಷಕರು ಮಕ್ಕಳನ್ನು ಓದಿಸುವ ಸ್ಥಿತಿಯಲ್ಲಿ ಇಲ್ಲದಿದ್ದರೆ ಅಂತಹ ಮಕ್ಕಳನ್ನು ವಸತಿ ಶಾಲೆಗೆ ಸೇರಿಸಲು ಕ್ರಮ ವಹಿಸಿ. ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

ಜಿಲ್ಲೆಯ ರಸ್ತೆ ಬದಿಗಳಲ್ಲಿ ಮಕ್ಕಳು ಭಿಕ್ಷಾಟನೆ ಮಾಡುವುದನ್ನು ತಡೆಯಲು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಿ ಶಿಕ್ಷಣ ನೀಡಲು ಅಽಕಾರಿಗಳು ಸಂಘಟಿತರಾಗಿ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳು ಅನಿರೀಕ್ಷಿತ ದಾಳಿಗಳನ್ನು ನಡೆಸಿ ಭಿಕ್ಷಾಟನೆ ಮಾಡುವ ಮಕ್ಕಳನ್ನು ರಕ್ಷಿಸಿ ಎಂದರು.

ಬಾಲ ಕಾರ್ಮಿಕ ಮಕ್ಕಳು ಹೆಚ್ಚಾಗಿ ಕಂಡು ಬರುವ ಸೂಕ್ಷ್ಮಸ್ಥಳಗಳನ್ನು ಗುರುತಿಸಿ, ಅಂತಹ ಸ್ಥಳಗಳ ಗಣ್ಯವ್ಯಕ್ತಿಗಳ ಅಧ್ಯಕ್ಷತೆಯಲ್ಲಿ ಜಾಗೃತಿ ಶಿಬಿರಗಳನ್ನು ಆಯೋಜಿಸಿ, ಬಾಲ ಕಾರ್ಮಿಕ ಮಕ್ಕಳನ್ನು ಶಾಲೆಗೆ ಕರೆತನ್ನಿ. ಜಿಲ್ಲೆಯಲ್ಲಿ ಹೆಚ್ಚಿನ ಜಾಗೃತಿ ಶಿಬಿರಗಳನ್ನು ಆಯೋಜಿಸಿ ಮುಂದಿನ ಸಭೆಗೆ ಮಾಹಿತಿ ನೀಡಿ ಎಂದರು.

ಜಿಲ್ಲೆಯಲ್ಲಿ 12 ವೃತ್ತಗಳಲ್ಲಿ 2025ರ ಏಪ್ರಿಲ್ ನಿಂದ 2026ರ ಮಾರ್ಚ್ ವರೆಗೆ 1483 ದಾಳಿಗಳನ್ನು ನಡೆಸಿ 3 ಬಾಲ ಕಾರ್ಮಿಕರು, 34 ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ 12 ಪ್ರಕರಣಗಳಲ್ಲಿ 1,62000 ರೂ. ದಂಡ ವಸೂಲು ಮಾಡಲಾಗಿದೆ ಎಂದರು.

ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತೆ ಲಲಿತಾ ಬಾಯಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯೋಗೇಶ್ ಕುಮಾರ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

11 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

19 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago