dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 14 ಆನೆಗಳು, ಅವುಗಳ ಮಾವುತರು ಮತ್ತು ಕಾವಾಡಿಗರು ತಲಾ 14 ಮಂದಿ, ಅರಣ್ಯ ಸಿಬ್ಬಂದಿ ಸೇರಿದಂತೆ ಒಟ್ಟು 43 ಜನರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಗಜಪಯಣದಿಂದ ಜಂಬೂಸವಾರಿ ಪೂರ್ಣಗೊಳಿಸಿ ಮತ್ತೆ ಕಾಡಿಗೆ ತೆರಳುವವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ. ಇದಕ್ಕಾಗಿ ಜಿಲ್ಲಾಡಳಿತ ವತಿಯಿಂದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಗೆ 67,000 ರೂ ಪ್ರೀಮಿಯಂ ಪಾವತಿಸಲಾಗಿದೆ.
ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಎಲ್ಲಾ ಗಂಡಾನೆಗಳಿಗೆ ಒಟ್ಟು 50 ಲಕ್ಷ ವಿಮೆ ಮಾಡಿಸಲಾಗಿದ್ದು, ಹೆಣ್ಣಾನೆಗಳಿಗೆ 18 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.
ಸಿಬ್ಬಂದಿ, ಕಾವಾಡಿಗರು, ಮಾವುತರು, ವಿಶೇಷ ಮಾವುತರು, ಸಹಾಯಕರು, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯ ಅಧಿಕಾರಿ, ಪಶುವೈದ್ಯಾಧಿಕಾರಿ, ಸಹಾಯಕರು ಸೇರಿದಂತೆ ಒಟ್ಟು 43 ಮಂದಿಗೆ 86 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.
ಇನ್ನು ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ಇದಕ್ಕೆ 50 ಲಕ್ಷ ರೂ ವಿಮೆ ಪರಿಹಾರ ಸಿಗಲಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…