ಮೈಸೂರು ನಗರ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಹಾಗೂ ಮಾವುತರಿಗೆ ಆರ್ಥಿಕ ಭದ್ರತೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 14 ಆನೆಗಳು, ಅವುಗಳ ಮಾವುತರು ಮತ್ತು ಕಾವಾಡಿಗರು ತಲಾ 14 ಮಂದಿ, ಅರಣ್ಯ ಸಿಬ್ಬಂದಿ ಸೇರಿದಂತೆ ಒಟ್ಟು 43 ಜನರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಗಜಪಯಣದಿಂದ ಜಂಬೂಸವಾರಿ ಪೂರ್ಣಗೊಳಿಸಿ ಮತ್ತೆ ಕಾಡಿಗೆ ತೆರಳುವವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ. ಇದಕ್ಕಾಗಿ ಜಿಲ್ಲಾಡಳಿತ ವತಿಯಿಂದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಗೆ 67,000 ರೂ ಪ್ರೀಮಿಯಂ ಪಾವತಿಸಲಾಗಿದೆ.

ಅಂಬಾರಿ ಹೊರುವ ಕ್ಯಾಪ್ಟನ್‌ ಅಭಿಮನ್ಯು ಸೇರಿದಂತೆ ಎಲ್ಲಾ ಗಂಡಾನೆಗಳಿಗೆ ಒಟ್ಟು 50 ಲಕ್ಷ ವಿಮೆ ಮಾಡಿಸಲಾಗಿದ್ದು, ಹೆಣ್ಣಾನೆಗಳಿಗೆ 18 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.

ಸಿಬ್ಬಂದಿ, ಕಾವಾಡಿಗರು, ಮಾವುತರು, ವಿಶೇಷ ಮಾವುತರು, ಸಹಾಯಕರು, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯ ಅಧಿಕಾರಿ, ಪಶುವೈದ್ಯಾಧಿಕಾರಿ, ಸಹಾಯಕರು ಸೇರಿದಂತೆ ಒಟ್ಟು 43 ಮಂದಿಗೆ 86 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.

ಇನ್ನು ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ಇದಕ್ಕೆ 50 ಲಕ್ಷ ರೂ ವಿಮೆ ಪರಿಹಾರ ಸಿಗಲಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago