ಮೈಸೂರು ನಗರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.

ನಾಳೆ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ನಾಳೆ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಗುರುವಾರದಂದು ಬೆಳಿಗ್ಗೆ 8.30ಕ್ಕೆ ಮೈಸೂರಿನ ಗಾಂಧಿ ಸ್ಕ್ವೇರ್‌ ಬಳಿ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.

ಇದನ್ನು ಓದಿ :  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಪ್ರವಾಸಿಗರಿಗೆ ಭರಪೂರ ಮನರಂಜನೆ

ತದನಂತರದಲ್ಲಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಆದಾದ ಬಳಿಕ ಮಧ್ಯಾಹ್ನ 1 ಗಂಟೆಗೆ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆಯ ಆವರಣದಲ್ಲಿರುವ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆ ನೆರವೇರಿಸಲಿದ್ದಾರೆ.

ಇದಾದ ನಂತರ ಸಿಎಂ ಸಿದ್ದರಾಮಯ್ಯ ಅವರು ಸಂಜೆ ವೇಳೆಗೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪದಲ್ಲಿ ಪಂಜಿತ ಕವಾಯತು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

14 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

14 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago