dasar
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಜಂಬೂಸವಾರಿಯ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಿ ಅರಮನೆ ಅವರಣಕ್ಕೆ ಬರ ಮಾಡಿಕೊಳ್ಳಲಾಯಿತು.
ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಸಂಜೆ 6:45ರ ಗೊಧೋಳಿ ಲಗ್ನದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಹಾಗೂ ಅದರೊಂದಿಗೆ ಭೀಮ, ಕಂಜನ್, ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಾವೇರಿ ಹಾಗೂ ಲಕ್ಷ್ಮೀ ಆನೆಗಳಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಪುಷ್ಪಾರ್ಚನೆ ಮಾಡುವ ಮುಖಾಂತರ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.
ಎಂದಿನಂತೆ ಪೊಲೀಸ್ ವಂದನೆ ಸ್ವೀಕರಿಸಿ ಮೊದಲ ತಂಡದ ಎಲ್ಲಾ ಆನೆಗಳು ಅರಮನೆ ಪ್ರವೇಶಿಸಿದವು. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದವು. ಸಾರ್ವಜನಿಕರು ಕೂಡ ಕಾರ್ಯಕ್ರಮವನ್ನು ವೀಕ್ಷಿಸಿ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…