ಮೈಸೂರು ನಗರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಆಗಸ್ಟ್.10ರಂದು ಅರಮನೆ ಪ್ರವೇಶಿಸಲಿರುವ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.‌10ರಂದು ಅರಮನೆಗೆ ಪ್ರವೇಶಿಸಲಿವೆ.

ಆಗಸ್ಟ್.‌10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಗಜಪಡೆಗಳು ಅರಮನೆ ಪ್ರವೇಶಿಸಲಿದ್ದು, ಇದನ್ನು ಸಾರ್ವಜನಿಕರು ಕೂಡ ಕಣ್ತುಂಬಿಕೊಳ್ಳಬಹುದಾಗಿದೆ.

ಈಗಾಗಲೇ ಅರಮನೆ ಆವರಣದಲ್ಲಿ ದಸರಾ ಗಜಪಡೆಗಳು, ಮಾವುತರು ಹಾಗೂ ಕಾವಾಡಿಗರ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ಭಾನುವಾರದಿಂದ ನಾಡಹಬ್ಬ ದಸರಾ ಮಹೋತ್ಸವ ಮುಗಿಯುವವರೆಗೂ ಆನೆಗಳು ಅರಮನೆ ಆವರಣದಲ್ಲೇ ಬೀಡುಬಿಡಲಿವೆ.

ನಿತ್ಯ ಬೆಳಿಗ್ಗೆ ಹಾಗೂ ಸಂಜೆ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತದೆ. ವಿಜಯದಶಮಿ ಜಂಬೂಸವಾರಿ ದಿನದಂದು ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ರಾಜಬೀದಿಯಲ್ಲಿ ಹೆಜ್ಜೆ ಹಾಕಲಿದ್ದಾನೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 hours ago