ಮೈಸೂರು ನಗರ

ಮೈಸೂರಿನಲ್ಲಿ ವಿಶ್ವ ಗುಬ್ಬಚ್ಚಿ ದಿನಾಚರಣೆ: ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನ ಜಾಗೃತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನಾಚರಣೆ ಕಾರ್ಯಕ್ರಮಕ್ಕೆ ನಟ ಆದಿ ಲೋಕೇಶ್ ಅವರು ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರು ಹಾಗೂ ಆಹಾರ ಹಾಕುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಗುಬ್ಬಿ ಈಗ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಆದರೆ ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅಳಿವಿನ ಅಂಚಿನಲ್ಲಿದೆ. ಗುಬ್ಬಚ್ಚಿ ದಿನ ಮಾತ್ರ ಪಕ್ಷಿಗಳಿಗೆ ನೀರು ಆಹಾರ ನೀಡುವುದು ಮುಖ್ಯವಲ್ಲ. ಪ್ರತಿದಿನವೂ ಸಹ ಪಕ್ಷಿ ಸಂಕುಲವನ್ನು ಉಳಿಸಲು ತಮ್ಮ ತಮ್ಮ ಮನೆಯ ಮೇಲೆ ಪ್ರಾಣಿ ಪಕ್ಷಿಗಳಿಗೆ ನೀರಿನ ಬಟ್ಟಲು ಅಳವಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ಉರಗ ತಜ್ಞ ಸ್ನೇಕ್‌ ಶ್ಯಾಮ್‌ ಅವರು, ಇಂದು ಕೃಷಿಗೆ ಹಲವು ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನಪ್ಪುತ್ತಿವೆ. ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿಯುತ್ತದೆ. ಮನುಷ್ಯರು ನಾವು ಮಾತ್ರ ಬದುಕದೆ, ಎಲ್ಲಾ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕು. ದೇಶದಲ್ಲಿ ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ. ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದ್ದು, ಮನುಷ್ಯನಿಂದಲೇ ಗುಬ್ಬಿಗೆ ಕಂಟಕ ಎದುರಾಗಿದೆ. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಗುಬ್ಬಿ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

5 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

5 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

5 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

5 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

5 hours ago