ಮೈಸೂರು ನಗರ

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ.

ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್‌ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. ಪರಿಸರ ಸ್ನೇಹಿ ತಂಡ, ಕೆಎಂಪಿಕೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹತ್ತಾರು ಮಂದಿ ಭಾಗಿಯಾಗಿ ನೀರಿನ ಬೌಲ್‌ ಅಳವಡಿಕೆ ಮಾಡಿ ಪಕ್ಷಿ ಸಂಕುಲ ರಕ್ಷಣೆಗೆ ಪಣ ತೊಟ್ಟರು.

ಈ ಬಾರಿ ಬೇಸಿಗೆ ವೇಳೆ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು, ಆಹಾರದ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಕ್ಷಿಗಳಿಗೆ ನೀರು ಆಹಾರ ನೀಡುವ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಮಾಡುತ್ತಿದ್ದೇವೆ. ಮೈಸೂರಿಗರು ಕೂಡ ತಮ್ಮ ಮನೆಯ ಟೆರೇಸ್‌ಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲವನ್ನು ರಕ್ಷಣೆ ಮಾಡುವ ಕೆಲಸ ಮಾಡಿ ಎಂದು ಕೆಎಂಪಿಕೆ ಟ್ರಸ್ಟ್ ನ ವಿಕ್ರಮ್ ಅಯ್ಯಂಗಾರ್ ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

7 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

12 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

18 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago