ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ.
ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. ಪರಿಸರ ಸ್ನೇಹಿ ತಂಡ, ಕೆಎಂಪಿಕೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹತ್ತಾರು ಮಂದಿ ಭಾಗಿಯಾಗಿ ನೀರಿನ ಬೌಲ್ ಅಳವಡಿಕೆ ಮಾಡಿ ಪಕ್ಷಿ ಸಂಕುಲ ರಕ್ಷಣೆಗೆ ಪಣ ತೊಟ್ಟರು.
ಈ ಬಾರಿ ಬೇಸಿಗೆ ವೇಳೆ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು, ಆಹಾರದ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಕ್ಷಿಗಳಿಗೆ ನೀರು ಆಹಾರ ನೀಡುವ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಮಾಡುತ್ತಿದ್ದೇವೆ. ಮೈಸೂರಿಗರು ಕೂಡ ತಮ್ಮ ಮನೆಯ ಟೆರೇಸ್ಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲವನ್ನು ರಕ್ಷಣೆ ಮಾಡುವ ಕೆಲಸ ಮಾಡಿ ಎಂದು ಕೆಎಂಪಿಕೆ ಟ್ರಸ್ಟ್ ನ ವಿಕ್ರಮ್ ಅಯ್ಯಂಗಾರ್ ಮನವಿ ಮಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…