ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ.
ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. ಪರಿಸರ ಸ್ನೇಹಿ ತಂಡ, ಕೆಎಂಪಿಕೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹತ್ತಾರು ಮಂದಿ ಭಾಗಿಯಾಗಿ ನೀರಿನ ಬೌಲ್ ಅಳವಡಿಕೆ ಮಾಡಿ ಪಕ್ಷಿ ಸಂಕುಲ ರಕ್ಷಣೆಗೆ ಪಣ ತೊಟ್ಟರು.
ಈ ಬಾರಿ ಬೇಸಿಗೆ ವೇಳೆ ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು, ಆಹಾರದ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಕ್ಷಿಗಳಿಗೆ ನೀರು ಆಹಾರ ನೀಡುವ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಮಾಡುತ್ತಿದ್ದೇವೆ. ಮೈಸೂರಿಗರು ಕೂಡ ತಮ್ಮ ಮನೆಯ ಟೆರೇಸ್ಗಳಲ್ಲಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲವನ್ನು ರಕ್ಷಣೆ ಮಾಡುವ ಕೆಲಸ ಮಾಡಿ ಎಂದು ಕೆಎಂಪಿಕೆ ಟ್ರಸ್ಟ್ ನ ವಿಕ್ರಮ್ ಅಯ್ಯಂಗಾರ್ ಮನವಿ ಮಾಡಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…