ಮೈಸೂರು: ಉಪಜಾತಿ ಕಾಲಂನಲ್ಲಿ ಮಾದಿಗ ಎಂದು, ಧರ್ಮದ ಕಾಲಂನಲ್ಲೂ ಹಿಂದೂ ಧರ್ಮ ಎಂದು ಬರೆಸಿ ಎಂದು ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನಕ್ಕೆ ಮೊದಲಿಗೆ ಸಂತಾಪ ಸಲ್ಲಿಸುತ್ತೇವೆ. ಅವರ ನಿಧನ ಇಡೀ ರಾಜ್ಯ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.
ಇದನ್ನು ಓದಿ : ಒಳ ಮೀಸಲಾತಿ ವರದಿ ಜಾರಿ-ಗೊಂದಲಗಳಿಗೆ ದಾರಿ
ಬಳಿಕ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ನಾಗಮೋಹನ್ ದಾಸ್ ನೇತೃತ್ವ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾವೆಲ್ಲರೂ ಮಾಹಿತಿ ನೀಡಿದ್ದೀರಾ. ಇದೀಗ ಮತ್ತೆ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪ್ರಾರಂಭ ಆಗಿದೆ. ಈ ಸಮೀಕ್ಷೆಯಲ್ಲಿ ಮಾದಿಗ ಸಮುದಾಯ ಭಾಗಿಯಾಗಬೇಕು. ಸಮೀಕ್ಷೆಗೆ ವೇಳೆ ಅಧಿಕಾರಿಗಳು ಬಂದಾಗ ಎಲ್ಲಾ ಮಾಹಿತಿಗಳನ್ನು ನೀಡಿ. ಬಿ-061 ಕಾಲಂನಲ್ಲಿ ಎಲ್ಲರೂ ಮಾದಿಗ ಸಮುದಾಯ ಎಂದು ಬರೆಸಬೇಕು.
ಉಪಜಾತಿ ಕಾಲಂನಲ್ಲೂ ಮಾದಿಗ ಎಂದೇ ಬರೆಯಿಸಿ. ಧರ್ಮದ ಕಾಲಂನಲ್ಲಿ ಹಿಂದೂ ಧರ್ಮ ಅಂತಲೇ ಬರೆಸಬೇಕು. ಈ ಸಮೀಕ್ಷೆ ನಮ್ಮ ಅಳಿವು ಉಳಿವಿನ ಪ್ರಶ್ನೆ. ಈ ಸಮೀಕ್ಷೆಯಲ್ಲಿ ನಮ್ಮ ಸಮಾಜದ ಪರಿಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ ಎಂದು ಮನವಿ ಮಾಡಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…