ಮೈಸೂರು: ಉಪಜಾತಿ ಕಾಲಂನಲ್ಲಿ ಮಾದಿಗ ಎಂದು, ಧರ್ಮದ ಕಾಲಂನಲ್ಲೂ ಹಿಂದೂ ಧರ್ಮ ಎಂದು ಬರೆಸಿ ಎಂದು ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನಕ್ಕೆ ಮೊದಲಿಗೆ ಸಂತಾಪ ಸಲ್ಲಿಸುತ್ತೇವೆ. ಅವರ ನಿಧನ ಇಡೀ ರಾಜ್ಯ ಹಾಗೂ ರಾಷ್ಟ್ರಕ್ಕೆ ತುಂಬಲಾರದ ನಷ್ಟ ಎಂದು ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.
ಇದನ್ನು ಓದಿ : ಒಳ ಮೀಸಲಾತಿ ವರದಿ ಜಾರಿ-ಗೊಂದಲಗಳಿಗೆ ದಾರಿ
ಬಳಿಕ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ನಾಗಮೋಹನ್ ದಾಸ್ ನೇತೃತ್ವ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾವೆಲ್ಲರೂ ಮಾಹಿತಿ ನೀಡಿದ್ದೀರಾ. ಇದೀಗ ಮತ್ತೆ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪ್ರಾರಂಭ ಆಗಿದೆ. ಈ ಸಮೀಕ್ಷೆಯಲ್ಲಿ ಮಾದಿಗ ಸಮುದಾಯ ಭಾಗಿಯಾಗಬೇಕು. ಸಮೀಕ್ಷೆಗೆ ವೇಳೆ ಅಧಿಕಾರಿಗಳು ಬಂದಾಗ ಎಲ್ಲಾ ಮಾಹಿತಿಗಳನ್ನು ನೀಡಿ. ಬಿ-061 ಕಾಲಂನಲ್ಲಿ ಎಲ್ಲರೂ ಮಾದಿಗ ಸಮುದಾಯ ಎಂದು ಬರೆಸಬೇಕು.
ಉಪಜಾತಿ ಕಾಲಂನಲ್ಲೂ ಮಾದಿಗ ಎಂದೇ ಬರೆಯಿಸಿ. ಧರ್ಮದ ಕಾಲಂನಲ್ಲಿ ಹಿಂದೂ ಧರ್ಮ ಅಂತಲೇ ಬರೆಸಬೇಕು. ಈ ಸಮೀಕ್ಷೆ ನಮ್ಮ ಅಳಿವು ಉಳಿವಿನ ಪ್ರಶ್ನೆ. ಈ ಸಮೀಕ್ಷೆಯಲ್ಲಿ ನಮ್ಮ ಸಮಾಜದ ಪರಿಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ ಎಂದು ಮನವಿ ಮಾಡಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…