ಮೈಸೂರು ನಗರ

ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಮೈಸೂರು ಪಾಕ್‌ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕ ಎನ್ನುವ ಪದ ಸಂಸ್ಕೃತ.
ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್ ಎಂಬ ಪದ ಇದೆ ಎಂದು ಅದನ್ನು ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್‌ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಈಗ ಎಷ್ಟೋ ಹೆಸರುಗಳನ್ನು ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದರು.

ಇನ್ನು ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ರಾಯಭಾರಿಯಾಗಲು ನಿರಾಸಕ್ತಿ ತೋರಿಸಿದ ಅವರು, ನಾನು ರಾಯಭಾರಿ ಆಗಲ್ಲ. ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ. ನಾನು ಜನಸೇವಾ ಕ್ಷೇತ್ರದಲ್ಲಿದ್ದೇನೆ. ಹಾಗಾಗಿ ರಾಯಭಾರಿ ಆಗಲು ಹೋಗಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷೆಯ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago