ಮೈಸೂರು ನಗರ

ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಮೈಸೂರು ಪಾಕ್‌ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕ ಎನ್ನುವ ಪದ ಸಂಸ್ಕೃತ.
ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್ ಎಂಬ ಪದ ಇದೆ ಎಂದು ಅದನ್ನು ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್‌ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಈಗ ಎಷ್ಟೋ ಹೆಸರುಗಳನ್ನು ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದರು.

ಇನ್ನು ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ರಾಯಭಾರಿಯಾಗಲು ನಿರಾಸಕ್ತಿ ತೋರಿಸಿದ ಅವರು, ನಾನು ರಾಯಭಾರಿ ಆಗಲ್ಲ. ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ. ನಾನು ಜನಸೇವಾ ಕ್ಷೇತ್ರದಲ್ಲಿದ್ದೇನೆ. ಹಾಗಾಗಿ ರಾಯಭಾರಿ ಆಗಲು ಹೋಗಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷೆಯ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

1 hour ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

2 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

2 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

2 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

2 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

2 hours ago