ಮೈಸೂರು ನಗರ

ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಮೈಸೂರು ಪಾಕ್‌ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕ ಎನ್ನುವ ಪದ ಸಂಸ್ಕೃತ.
ಪಾಕ ಎಂದರೆ ಸಿಹಿ ಎಂದರ್ಥ ಬರುತ್ತದೆ. ಪಾಕ್ ಎಂಬ ಪದ ಇದೆ ಎಂದು ಅದನ್ನು ಬದಲಾಯಿಸುವುದು ಸರಿಯಲ್ಲ. ಮೈಸೂರು ಪಾಕ್‌ಗೆ ಎಷ್ಟೋ ವರ್ಷಗಳ ಇತಿಹಾಸ ಇದೆ. ಅದೇ ರೀತಿ ಮಾಡುತ್ತಾ ಹೋದರೆ ಈಗ ಎಷ್ಟೋ ಹೆಸರುಗಳನ್ನು ಬದಲಾಯಿಸಬೇಕಾಗುತ್ತದೆ. ಅದೆಲ್ಲ ಈಗ ಅಪ್ರಸ್ತುತ ಎಂದರು.

ಇನ್ನು ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ರಾಯಭಾರಿಯಾಗಲು ನಿರಾಸಕ್ತಿ ತೋರಿಸಿದ ಅವರು, ನಾನು ರಾಯಭಾರಿ ಆಗಲ್ಲ. ಅದರ ಬಗ್ಗೆ ನನಗೆ ಆಸಕ್ತಿನೂ ಇಲ್ಲ. ನಾನು ಜನಸೇವಾ ಕ್ಷೇತ್ರದಲ್ಲಿದ್ದೇನೆ. ಹಾಗಾಗಿ ರಾಯಭಾರಿ ಆಗಲು ಹೋಗಲ್ಲ. ನನ್ನ ಕೆಲಸವೇ ಬೇಕಾದಷ್ಟು ಇದೆ. ಮೈಸೂರು ಸ್ಯಾಂಡಲ್ ಸೋಪಿಗೆ ಅದರದೇ ಆದ ಐತಿಹ್ಯವಿದೆ. ಅದಕ್ಕೆ ದೇಶಾದ್ಯಂತ ತನ್ನದೇ ಆದ ಮಾರುಕಟ್ಟೆ ಇದೆ. ದೇಶದ ಮಟ್ಟದಲ್ಲಿ ಪ್ರಸಿದ್ಧಿಯಾಗಿರುವ ಕನ್ನಡದ ಕಲಾವಿದರಿಂದ ಜಾಹೀರಾತು ಕೊಡಿಸಲಿ. ಅನ್ಯ ಭಾಷೆಯ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಟ್ಟು ರಾಯಭಾರಿಯಾಗಿಸುವ ಅಗತ್ಯ ಇಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

21 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

22 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 days ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 days ago