ಮೈಸೂರು ನಗರ

ಜಾತಿಗಣತಿಗೆ ನಮ್ಮ ತಕರಾರಿಲ್ಲ, ಅದು ವೈಜ್ಞಾನಿಕವಾಗಿ ಆಗಬೇಕು: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಜಾತಿಗಣತಿಗೆ ನಮ್ಮ ತಕರಾರಿಲ್ಲ. ಆದರೆ ಅದು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಗಣತಿ ಅವೈಜ್ಞಾನಿಕ ಎಂದು ಈಗಾಗಲೇ ಹೇಳಿದ್ದೇವೆ. ಜಾತಿಗಣತಿ ವೈಜ್ಞಾನಿಕವಾಗಿ ಆಗಬೇಕು. ಈ ಬಗ್ಗೆ ಸರ್ಕಾರ ಏನು ಮಾಡುತ್ತದೆ ನೋಡೋಣ. 10 ವರ್ಷದ ಹಿಂದಿನ ಗಣತಿಯನ್ನು ಈಗ ಬಿಡುಗಡೆ ಮಾಡಲು ಹೊರಟಿದ್ದಾರೆ. ಅದು ಸರಿಯಲ್ಲ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ. ಜಾತಿಗಣತಿಯನ್ನು ರಾಜಕೀಯವಾಗಿ ಎಲ್ಲರೂ ಬಳಕೆ ಮಾಡಿಕೊಳ್ಳುವುದು ಗೊತ್ತಿರುವ ವಿಚಾರ. ಆದರೆ ಸರಿಯಾದ ರೀತಿಯಲ್ಲಿ ಗಣತಿ ಆಗಬೇಕು ಎಂದರು.

ಇನ್ನು ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತ್ಯೇಕ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನದಲ್ಲಿ ಸಮುದಾಯದ ಗಣತಿಗೆ ಅವಕಾಶ ಇದೆ. ಅದೇ ರೀತಿ ವೀರಶೈವ ಲಿಂಗಾಯತ ಮಹಾಸಭಾ ಜಾತಿಗಣತಿ ಮಾಡಲು ಮುಂದಾಗಿದೆ. ಇದಕ್ಕಾಗಿ ಸಂವಿಧಾನದಲ್ಲಿ ಅವಕಾಶ ಮಾಡಬಹುದು ಎಂದು ಅಭಿಪ್ರಾಯ ಪಟ್ಟರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

4 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

4 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

4 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

4 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

4 hours ago