Mysore
20
scattered clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಚಾ.ನಗರ ಜಿಲ್ಲಾಧಿಕಾರಿಗೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಿಷ್ಟು

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿ ನಮಗೆ ಸೇರಿದ ಜಾಗವಿದೆ ಎಂದು ಪತ್ರ ಬರೆದಿದ್ದಾರೆ. ಈ ಪತ್ರದಿಂದ ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ. ಜಿಲ್ಲಾಧಿಕಾರಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ.
ನಮ್ಮ ಆಸ್ತಿ ಜಮೀನು ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಮೊದಲು ಜಿಲ್ಲಾಧಿಕಾರಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ವರದಿ ಬಂದ ನಂತರ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!