ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿ ನಮಗೆ ಸೇರಿದ ಜಾಗವಿದೆ ಎಂದು ಪತ್ರ ಬರೆದಿದ್ದಾರೆ. ಈ ಪತ್ರದಿಂದ ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ. ಜಿಲ್ಲಾಧಿಕಾರಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ.
ನಮ್ಮ ಆಸ್ತಿ ಜಮೀನು ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಮೊದಲು ಜಿಲ್ಲಾಧಿಕಾರಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ವರದಿ ಬಂದ ನಂತರ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…