ಮೈಸೂರು ನಗರ

ಚಾ.ನಗರ ಜಿಲ್ಲಾಧಿಕಾರಿಗೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಿಷ್ಟು

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿ ನಮಗೆ ಸೇರಿದ ಜಾಗವಿದೆ ಎಂದು ಪತ್ರ ಬರೆದಿದ್ದಾರೆ. ಈ ಪತ್ರದಿಂದ ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ. ಜಿಲ್ಲಾಧಿಕಾರಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ.
ನಮ್ಮ ಆಸ್ತಿ ಜಮೀನು ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಮೊದಲು ಜಿಲ್ಲಾಧಿಕಾರಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ವರದಿ ಬಂದ ನಂತರ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಂವಿಧಾನ ರಕ್ಷಿಸಿದ್ರೆ, ದೇಶ ಸುಭದ್ರ : ಸಿಎಂ

ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…

26 mins ago

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

1 hour ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

2 hours ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

3 hours ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

3 hours ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

3 hours ago