ಮೈಸೂರು ನಗರ

ಚಾ.ನಗರ ಜಿಲ್ಲಾಧಿಕಾರಿಗೆ ಪ್ರಮೋದಾದೇವಿ ಒಡೆಯರ್‌ ಪತ್ರ ಬರೆದ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಿಷ್ಟು

ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿ ನಮಗೆ ಸೇರಿದ ಜಾಗವಿದೆ ಎಂದು ಪತ್ರ ಬರೆದಿದ್ದಾರೆ. ಈ ಪತ್ರದಿಂದ ಆ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ನನ್ನಿಂದ ಅಥವಾ ನನ್ನ ತಾಯಿಯಿಂದ ಯಾವುದೇ ಅನಾನುಕೂಲವಾಗುವುದಿಲ್ಲ. ಅಲ್ಲಿನ ಜನರಿಗೆ ನಾವು ಯಾವುದೇ ತೊಂದರೆ ಕೊಡಲ್ಲ. ಜಿಲ್ಲಾಧಿಕಾರಿ ಅವರು ವರದಿ ಕೊಡಲಿ. ಅದನ್ನು ಬಿಟ್ಟು ಕೆಲವರು ಆತಂಕ ಸೃಷ್ಟಿ ಮಾಡಲು ಹೊರಟಿದ್ದಾರೆ. ನಮ್ಮಿಂದ ಅಲ್ಲಿನ ಜನಕ್ಕೆ ತೊಂದರೆ ಆಗಲ್ಲ.
ನಮ್ಮ ಆಸ್ತಿ ಜಮೀನು ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇವೆ. ಮೊದಲು ಜಿಲ್ಲಾಧಿಕಾರಿ ಅವರಿಂದ ವರದಿ ಬರಲಿ. ಅಲ್ಲಿನ ಜನರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ವರದಿ ಬಂದ ನಂತರ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ನಮ್ಮಿಂದ ಯಾವುದೇ ಜನರಿಗೆ ಅನಾನುಕೂಲವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

52 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

57 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago