yadhuveer wadiyar
ಮೈಸೂರು: ನಾಳೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಲ್ಲರಿಗೂ ಅನ್ನದಾತ ಆಗಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಅವರ ಜಯಂತಿಯಿದೆ. ಹಾಗಾಗಿ ಪೌರ ಕಾರ್ಮಿಕರಿಗೆ ಒಂದು ತಿಂಗಳ ದಿನಸಿ ವಸ್ತುಗಳನ್ನು ನೀಡಲಾಗುತ್ತದೆ ಎಂದರು.
ಇನ್ನು ಆರ್ಸಿಬಿಗೆ ಈ ಸಲ ಕಪ್ ಗೆಲ್ಲುವ ಅವಕಾಶ ಹೆಚ್ಚಿದೆ. ನಾನು ಕೂಡ ಆರ್ಸಿಬಿ ಮ್ಯಾಚ್ ನೋಡುತ್ತೇನೆ. 4 ಬಾರಿ ಫೈನಲ್ ಹಂತಕ್ಕೆ ಬಂದು ಸೋತಿದ್ದಾರೆ. ಕಳೆದ ಬಾರಿ ಕೂಡ ಹತ್ತಿರದಲ್ಲಿ ಸೋತಿದ್ದರು. ಈ ಬಾರಿ ಕಪ್ ಗೆಲ್ಲುವ ಭರವಸೆಯಿದೆ ಎಂದರು.
ಇದನ್ನೂ ಓದಿ:- ಆರ್ಸಿಬಿ ತಂಡಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಇನ್ನು ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯೋರ್ವ ಅನುಚಿತ ವರ್ತನೆ ತೋರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಿಮೆಗೆ ರಕ್ಷಣೆ ನೀಡಬೇಕು. ಪೊಲೀಸ್ ಕಮಿಷನರ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇವೆ. ಮೈಸೂರಿನಲ್ಲಿರುವ ಎಲ್ಲಾ ಪ್ರತಿಮೆಗಳಿಗೂ ರಕ್ಷಣೆ ನೀಡಬೇಕು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…