ಮೈಸೂರು ನಗರ

ಈ ಸಲ ಆರ್‌ಸಿಬಿ ಕಪ್‌ ಗೆಲ್ಲಲಿದೆ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ನಾಳೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಎಲ್ಲರಿಗೂ ಅನ್ನದಾತ ಆಗಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಅವರ ಜಯಂತಿಯಿದೆ. ಹಾಗಾಗಿ ಪೌರ ಕಾರ್ಮಿಕರಿಗೆ ಒಂದು ತಿಂಗಳ ದಿನಸಿ ವಸ್ತುಗಳನ್ನು ನೀಡಲಾಗುತ್ತದೆ ಎಂದರು.

ಇನ್ನು ಆರ್‌ಸಿಬಿಗೆ ಈ ಸಲ ಕಪ್‌ ಗೆಲ್ಲುವ ಅವಕಾಶ ಹೆಚ್ಚಿದೆ. ನಾನು ಕೂಡ ಆರ್‌ಸಿಬಿ ಮ್ಯಾಚ್‌ ನೋಡುತ್ತೇನೆ. 4 ಬಾರಿ ಫೈನಲ್‌ ಹಂತಕ್ಕೆ ಬಂದು ಸೋತಿದ್ದಾರೆ. ಕಳೆದ ಬಾರಿ ಕೂಡ ಹತ್ತಿರದಲ್ಲಿ ಸೋತಿದ್ದರು. ಈ ಬಾರಿ ಕಪ್‌ ಗೆಲ್ಲುವ ಭರವಸೆಯಿದೆ ಎಂದರು.

ಇದನ್ನೂ ಓದಿ:- ಆರ್‌ಸಿಬಿ ತಂಡಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಇನ್ನು ಒಡೆಯರ್‌ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯೋರ್ವ ಅನುಚಿತ ವರ್ತನೆ ತೋರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಿಮೆಗೆ ರಕ್ಷಣೆ ನೀಡಬೇಕು. ಪೊಲೀಸ್‌ ಕಮಿಷನರ್‌ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇವೆ. ಮೈಸೂರಿನಲ್ಲಿರುವ ಎಲ್ಲಾ ಪ್ರತಿಮೆಗಳಿಗೂ ರಕ್ಷಣೆ ನೀಡಬೇಕು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

27 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago