ಪಾಕ್ ತನ್ನ ಕೃತ್ಯಗಳನ್ನ ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು: ಸಂಸದ ಯದುವೀರ್ ಒಡೆಯರ್‌

ಮೈಸೂರು: ಪಾಕಿಸ್ತಾನ ತನ್ನ ಕೃತ್ಯಗಳನ್ನು ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆಗೆ ಪ್ರಧಾನಿ ಮೋದಿ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ. ಪಾಕ್‌ನ 9 ಭಯೋತ್ಪಾದಕ ಶಿಬಿರವನ್ನು ಗುರುತಿಸಿ ದಾಳಿ ಮಾಡಿ ಪ್ರತಿಕಾರ ತೀರಿಸಿಕೊಂಡಿದ್ದಾರೆ. ಪಾಕಿಸ್ತಾನ ಏನೇ ಪ್ರಯತ್ನ ಮಾಡಿದ್ರು ಅವರ ಪ್ರಯತ್ನಗಳನ್ನ ಮೊಟುಕುಗೊಳಿಸುವ ಕೆಲಸವನನು ಭಾರತ ಸರ್ಕಾರ ಮಾಡಿಯೇ ತೀರುತ್ತದೆ. ಪಾಕಿಸ್ತಾನದ ಎಲ್ಲಾ ಪ್ರಯತ್ನಗಳು ಸಂಪೂರ್ಣ ವಿಫಲವಾಗಿವೆ. ಭಯೋತ್ಪಾದನೆಗೆ ಅವಕಾಶ ಕೊಡದೆ ವಿಶ್ವದಾದ್ಯಂತ ಉಗ್ರವಾದ ತೊಲಗಿಸಬೇಕು. ಪಾಕಿಸ್ತಾನಿಯರು ಅವರ ಕೃತ್ಯಗಳನ್ನ ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದು ಅಭಿಪ್ರಾಯ ಪಟ್ಟರು.

ಇನ್ನು ಭಾರತ ಪಾಕ್ ಯುದ್ಧದ ಕ್ರೆಡಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯುದ್ದದ ಕ್ರೆಡಿಟ್ ಸೈನಿಕರಿಗೂ ಸಲ್ಲಬೇಕು ಪ್ರಧಾನಿ ಮೋದಿಗೂ ಸಲ್ಲಬೇಕು. ಈ ಸಂದರ್ಭದಲ್ಲಿ ರಾಜಕೀಯ ಮಾಡೋದು ಸರಿಯಿಲ್ಲ. ರಾಜಕೀಯ ಮಾಡುವ ಅಗತ್ಯ ಇಲ್ಲ. ಕಾಂಗ್ರೆಸ್‌ನವರಿಗೆ ಸಂದೇಶ ಕೊಡುವ ಸ್ಥಾನದಲ್ಲೂ ನಾನಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲರೂ ಒಟ್ಟಾಗಿರಬೇಕು. ಎಲ್ಲರೂ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕೈಜೋಡಿಸಿ ನಿಲ್ಲಬೇಕು. ಅಂದಿನ ಕಾಲಕ್ಕೆ ತಕ್ಕಂತೆ ಇಂದಿರಾ ಗಾಂಧಿ ಕೆಲಸ ನಿರ್ವಹಿಸಿದ್ದಾರೆ. ಇಂದಿನ ಕಾಲಕ್ಕೆ ತಕ್ಕಂತೆ ಪ್ರಧಾನಿ ಮೋದಿ ಉತ್ತಮ ನಿರ್ಧಾರದಲ್ಲಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

3 hours ago