ಮೈಸೂರು ನಗರ

ನಮ್ಮ ಪೂರ್ವಿಕರು ಜನರ ಭವಿಷ್ಯದ ದೃಷ್ಟಿಯಿಂದ ಕೆಲಸ ಮಾಡಿದ್ದಾರೆ: ಯತೀಂದ್ರಗೆ ಟಾಂಗ್‌ ಕೊಟ್ಟ ಸಂಸದ ಯದುವೀರ್‌

ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕರೆ ಜನರಿಗೋಸ್ಕರ ಕೆಲಸ ಮಾಡಬೇಕು. ಅದೇನು ಪಂದ್ಯಾವಳಿ ಅಲ್ಲ. ನಮ್ಮ ಕಾಲದಲ್ಲಿ ಜನರಿಗೆ ಕೊಟ್ಟ ಮಾತುಗಳಂತೆ ಕೆಲಸ ಮಾಡಬೇಕಿದೆ. ಅದನ್ನು ಬಿಟ್ಟು ಹೋಲಿಕೆ ಮಾಡಿಕೊಂಡು ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ ಎಂದು ಒಡೆಯರ್‌ ಹೇಳಿದರು.

ರಾಜಪ್ರಭುತ್ವ ಪ್ರಜಾಪ್ರಭುತ್ವ ಯಾವುದೇ ಇದ್ರು ಜನರಿಗೋಸ್ಕರ ಕೆಲಸ ಮಾಡೋದು ಅಷ್ಟೇ. ನಾಲ್ವಡಿ, ಚಾಮರಾಜ ಒಡೆಯರ್ ಮಾಡಿರುವ ಕೆಲಸ ಜನರ ಹಿತಕ್ಕಾಗಿ. ಅವರು ತೋರಿಕೆಗೋಸ್ಕರ ಕೆಲಸ ಮಾಡಿಲ್ಲ. ಆದರಿಂದ ಈಗ ಒಂದು ಸರ್ವೇ ಮಾಡಲಿ. ಯಾರು ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ.

ಇದಕ್ಕೆ ಜನರು ಕೂಡ ಉತ್ತರ ಕೊಡ್ತಾರೆ. ನಮ್ಮ ವಂಶದ ಬಗ್ಗೆ ನಾನು ಮಾತನಾಡುವುದರಲ್ಲಿ ಅರ್ಥ ಅಲ್ಲ. ಫೀಲ್ಡಿಗೆ ಇಳಿದು ಜನರ ಬಳಿ ಸರ್ವೇ ಮಾಡಿದ್ರೆ ಎಲ್ಲದಕ್ಕೂ ಉತ್ತರ ಸಿಗುತ್ತದೆ. ಇಂತಹ ಹೇಳಿಕೆಗಳಿಂದ ಜನರನ್ನು ಡೈವರ್ಟ್ ಮಾಡೋದೆ ಕಾಂಗ್ರೆಸ್‌ ಕೆಲಸ. ನಮ್ಮ ಪೂರ್ವಿಕರು ಜನರ ಭವಿಷ್ಯದ ಬಗ್ಗೆ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ.

ಕಾಂಗ್ರೆಸ್‌ನವರು ಬೀದಿಗಿಳಿದು ನೋಡಿದ್ರೆ ಯಾರ ಯಾರ ಕೆಲಸ ಏನು ಎಂಬುದು ಗೊತ್ತಾಗುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

4 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

5 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

5 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

11 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

11 hours ago