ಮೈಸೂರು ನಗರ

ಮುಡಾದ 300 ಕೋಟಿ ಆಸ್ತಿ ಜಪ್ತಿ ವಿಚಾರ| ಸಿಎಂ ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಿ ಕಪ್ಪುಚುಕ್ಕೆ ತರುವ ಪ್ರಯತ್ನ: ಯತೀಂದ್ರ, ಎಚ್‌.ಸಿ.ಮಹದೇವಪ್ಪ

ಮೈಸೂರು: ಮುಡಾ ಹಗರಣದಲ್ಲಿ ಇ.ಡಿ.ಅಧಿಕಾರಿಗಳು 300 ಕೋಟಿ ಆಸ್ತಿ ಜಪ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು(ಜನವರಿ.19) ಕುಂಭಮೇಳದ ಬಗ್ಗೆ ಸುದ್ದಿಗೋಷ್ಠಿ ಏರ್ಪಡಿಸಿದ್ದ ವೇಳೆ ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ ನಿವೇಶನಗಳು ಹಂಚಿಕೆಯಾಗಿರುವುದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಬಿಜೆಪಿ ನೇಮಕ ಮಾಡಿರುವ ಅಧಿಕಾರಿಗಳಿಂದಲೇ ಸೈಟ್‌ ಹಂಚಿಕೆಯಾಗಿದೆ. ಹೀಗಾಗಿ ಈ ಬಗ್ಗೆಯೂ ಇ.ಡಿ.ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನೂ ಇ.ಡಿ. ತನಿಖಾ ಸಂಸ್ಥೆಯೂ ವಶಪಡಿಸಿಕೊಂಡಿದ್ದ ಮುಡಾದ 142 ನಿವೇಶನಗಳಿಗೂ, ಮುಡಾ ಪ್ರಕರಣದ 14 ನಿವೇಶನಗಳಿಗೂ ಸಂಬಂಧವಿಲ್ಲ. ನಾವು ಕಾನೂನಾತ್ಮಕವಾಗಿಯೇ ನಿವೇಶನಗಳನ್ನು ಪಡೆದಿದ್ದೇವೆ. ಆದರೆ ಇ.ಡಿ. ತನಿಖಾ ಸಂಸ್ಥೆಯವರು ಮೀಸ್‌ ಲೀಡ್‌ ಆಗಿ ಟ್ವೀಟ್‌ ಮಾಡಿದ್ದಾರೆ. ಅವರು ನಡೆಸಿರುವ ತನಿಖೆಯೇ ಬೇರೆ, ಅದರಲ್ಲಿ 14 ನಿವೇಶನಗಳ ಬಗ್ಗೆ ಉಲ್ಲೇಖವಿಲ್ಲ. ಆದರೂ ಅನಗತ್ಯವಾಗಿ ಸಿಎಂ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಮಾತನಾಡಿ, ಸಿಎಂ  ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪುಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಮುಡಾ ಹಗರಣದ ಬಗ್ಗೆ ಲೀಗಲ್‌ ಟೀಂ ಎಲ್ಲವನ್ನೂ ಪರಿಶೀಲನೆ ಮಾಡುತ್ತಿದೆ. ಈ ವಿಚಾರ ಸರ್ಕಾರದ ಇಮೇಜ್‌ಗೆ ಮಸಿ ಬಳಿಯುವ ಯತ್ನವಾಗಿದೆ. ಈ ಬಗ್ಗೆ ನಾವು ಕಾನೂನುಬದ್ಧವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

21 hours ago